ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿ- ಶಾಸಕ ಧೀರಜ್ ಮುನಿರಾಜ್


ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ-2025 ಕಾರ್ಯಕ್ರಮ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಾಗೂ ಮಾಜಿ ಪ್ರಧಾನಿ ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಸಂವಿಧಾನ ಪೀಠಿಕೆಯುಳ್ಳ ಬೆಳ್ಳಿ ರಥದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಬೃಹತ್ ರಾಷ್ಟ್ರ ಧ್ವಜ ಹಿಡಿದು ಸಂಚರಿಸಿದರು.

ಸಂವಿಧಾನದ ಮಹತ್ವ ಸಾರುವ ಭಿತ್ತಿಪತ್ರಗಳು ಹಾಗೂ ಘೋಷಣೆಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ, ಭಗತ್ ಸಿಂಗ್ ಕ್ರೀಡಾಂಗಣದ ವೇದಿಕೆ ತಲುಪಿತು.

ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಭಾರತ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೇರಿಕಾದಲ್ಲಿ ಟ್ರಂಪ್ ಆಡಳಿತ ಹಸ್ತಾಂತರವಾಗುವಾಗ ಕಾನೂನು ಕೊಡಕು ಎದುರಾಗಿತ್ತು. ಆದರೆ ಭಾರತ ಸಂವಿಧಾನದ ಚುನಾವಣೆ ವ್ಯವಸ್ಥೆ ಜಗತ್ತಿಗೇ ಮಾದರಿಯಾಗಿದ್ದು, ಗ್ರಾಮ ಪಂಚಾಯಿತಿಯಿಂದ ಹಿಡಿದು, ಪ್ರಧಾನ ಮಂತ್ರಿಯವರೆಗೆ ಚುನಾವಣೆ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಅಧಿಕಾರ ಮುಗಿದ ನಂತರ ಕೆಲ ಕ್ಷಣಗಳಲ್ಲಿಯೇ ಹಸ್ತಾಂತರ ಮಡಬೇಕಿದೆ. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳನ್ನು ನೀಡುವ ಮೂಲಕ ಸಮಾನತೆ, ಸಮಬಾಳು ಪರಿಕಲ್ಪನೆ ಹೊಂದಿರುವುದು ನಮ್ಮ ಸಂವಿದಾನ. ಇಂತಹ ಸಂವಿಧಾನದ ಆಶಯಗಳಿಗೆ ದಕ್ಕೆ ಬಾರದಂತೆ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ಸಂವಿಧಾನ ಕುರಿತಾಗಿ ಮಾತನಾಡಿದ ಉಪನ್ಯಾಸಕ ಎನ್.ಮಹೇಶ್, ದೇಶದಲ್ಲಿ ಬ್ರಿಟೀಷರ ಆಳ್ವಿಕೆಯಿದ್ದಾಗ ನಮ್ಮದೇ ಆಡಳಿತ ವ್ಯವಸ್ಥೆ ಬಂದು ನಾವು ಸ್ವತಂತ್ರ್ಯರಾಗಬೇಕೆನ್ನುವ ಕೂಗು ಇತ್ತು. ಅಂತೆಯೇ ದೇಶಕ್ಕೆ ಒಂದು ಸಂವಿಧಾನ ಬೇಕು ಎನ್ನುವ ಒತ್ತಾಯಗಳಿದ್ದವು. ಸಂವಿಧಾನವು 1949ರ ನವೆಂಬರ್ 26 ರಂದು ಸಾಕಾರಕ್ಕೆ ಬಂದು, 1950ರ ಜನವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಾಬು ರಾಜೇಂದ್ರ ಪ್ರಸಾದ್ ಕಾರ್ಯ ನಿರ್ವಹಿಸಿದ್ದರು. ಕರಡು ಸಮಿತಿ ಅಧ್ಯಕ್ಷರಾಗಿದ್ದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಫ್ರಾನ್ಸ್, ಸೋವಿಯತ್ ಒಕ್ಕೂಟ, ಐರ್ಲೆಂಡ್ ಜಪಾನ್ ಮೊದಲಾದ ದೇಶಗಳ ಸಂವಿಧಾನವನ್ನು ಅಭ್ಯಸಿಸಿ, ಅಳವಡಿಸಿಕೊಂಡು ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ. ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್ 5 ಅನುಬಂಧಗಳು, 98 ತಿದ್ದುಪಡಿಗಳಿವೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ ಗಾಯಕ ಅಶ್ವಿನ್ ಶರ್ಮ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದ ರಾಜು, ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ.ಟಿ.ಎಸ್, ತಾಲೂಕು ಪಂಚಾಯಿತಿ ಇ.ಓಮಂಜುನಾಥ ಅರ್ತಿ,ಡಿವೈಎಸ್ಪಿ ಪಾಂಡುರಂಗ.ಎಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಯ ಮುಖಂಡರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago