Categories: ಲೇಖನ

ಭಾರತ ಸರ್ಕಾರದ ಅರ್ಥ ವ್ಯವಸ್ಥೆ ಅಂಕಿಅಂಶ

ಭಾರತದ ಒಟ್ಟು ವಿಸ್ತೀರ್ಣ ಸುಮಾರು 33 ಲಕ್ಷ ಚದರ ಕಿಲೋ ಮೀಟರ್ ಗಳು, ಭಾರತದ ಒಟ್ಟು ಜನಸಂಖ್ಯೆ ಸುಮಾರು 143 ಕೋಟಿ, ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 49 ಲಕ್ಷ ಕೋಟಿ, ಭಾರತದ ಒಟ್ಟು ಆದಾಯ ಸುಮಾರು 32 ಲಕ್ಷ ಕೋಟಿ, ಭಾರತದ ಒಟ್ಟು ಸಾಲ 182 ಲಕ್ಷ ಕೋಟಿ, ಭಾರತ ಕಟ್ಟುತ್ತಿರುವ ಸಾಲದ ಮೇಲಿನ ಬಡ್ಡಿ ಸುಮಾರು 11.5 ಲಕ್ಷ ಕೋಟಿ, ಭಾರತದ ಒಟ್ಟು ಆಂತರಿಕ ಉತ್ಪನ್ನ ಸುಮಾರು 298 ಲಕ್ಷ ಕೋಟಿ…….

ಇದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾಗ ಗಮನಿಸಿದ ಕುತೂಹಲಕರ ಅಂಶವನ್ನು, ನಮ್ಮ ದೇಶದ ಜನರ ಆರ್ಥಿಕ ಪರಿಸ್ಥಿತಿ ತಿಳಿಯಲು ಸಹಾಯ ಆಗಬಹುದು ಎಂದು ಇಲ್ಲಿ ಬರೆಯುತ್ತಿದ್ದೇನೆ.

ಇದರ ಆಧಾರದ ಮೇಲೆ ನಾವುಗಳು ಬಡವರೋ, ಶ್ರೀಮಂತರೋ ನೀವೇ ನಿರ್ಧರಿಸಿ. ಅಲ್ಲದೆ ಭಾರತದಲ್ಲಿ ಬಹುಶಃ ಲೆಕ್ಕಕ್ಕೆ ಸಿಗದ 3 – 4 ಕೋಟಿಗೂ ಹೆಚ್ಚು ಜನ ಇದ್ದಾರೆ ಮತ್ತು ಅಂಬಾನಿ, ಅದಾನಿ, ಟಾಟಾ, ಬಿರ್ಲಾ, ಅಜೀಂ ಪ್ರೇಮ್ಜಿ ಮುಂತಾದ ಬಹುದೊಡ್ಡ ಶ್ರೀಮಂತರು ಮತ್ತು ಊಟಕ್ಕೂ ಪರದಾಡುವ ಅನೇಕ ಬಡವರ ನಡುವಿನ ಅಂತರ ತುಂಬಾ ಇದೆ.

ಸುಮ್ಮನೆ ಭ್ರಮಾಲೋಕದಲ್ಲಿ ಯಾರೋ ಅಂಕಣಕಾರರು, ಭಾಷಣಕಾರರು, ಪ್ರವಚನಕಾರರುಗಳು ಹೇಳುವುದು ಭಾರತ ವಿಶ್ವದ ಬಲಿಷ್ಠ ದೇಶ ಎಂದು.

ವೈಯಕ್ತಿಕವಾಗಿ ಹೇಳಬೇಕೆಂದರೆ ಈ ಅಂಕಿಅಂಶಗಳಿಗಿಂತ ಹೆಚ್ಚಿನ ಬಡತನ ಭಾರತದಲ್ಲಿ ಇದೆ.

ಈ ಅಂಶಗಳನ್ನು ನಾವು ಸರಿಯಾಗಿ ಅರ್ಥಮಾಡಿಕೊಂಡರೆ ನಾವು ಸಾಗಬೇಕಾದ ಹಾದಿ, ನಮ್ಮ ಆದ್ಯತಾ ವಲಯಗಳು, ಅದಕ್ಕಾಗಿ ನಾವು ಪಡಬೇಕಾಗಿರುವ ಶ್ರಮ, ನಮ್ಮ ಜವಾಬ್ದಾರಿ ಎಲ್ಲವೂ ಸ್ಪಷ್ಟವಾಗುತ್ತದೆ.

ಚುನಾವಣೆ ಗೆಲ್ಲುವುದೇ ಒಂದು ದೊಡ್ಡ ಸಾಧನೆ ಎಂದು ನಮ್ಮ ರಾಜಕೀಯ ಪಕ್ಷಗಳು ಭಾವಿಸುವುದಾದರೆ ನಮ್ಮ ನಿಜವಾದ ಅಭಿವೃದ್ಧಿ ಕನಸೇ ಆಗಬಹುದು.

ಯಾರೋ ಎಲ್ಲಿಂದಲೋ ನೀಡುವ ಅಂಕಿ ಅಂಶಗಳಿಗಿಂತ ನಾವು ನಮ್ಮ ಸುತ್ತಮುತ್ತ ಗಮನಿಸುವ ಸಾಮಾಜಿಕ ಆರ್ಥಿಕ ಪರಿಸ್ಥಿತಿಯೇ ನಿಜವಾದ ವರದಿಗಳು. ಆ ಪ್ರಕಾರ ಎಷ್ಟೋ ಜನ ಇನ್ನೂ ಅಪೌಷ್ಟಿಕತೆಯಿಂದ ನರಳುತ್ತಿರುವುದನ್ನು ಕಾಣುತ್ತೇವೆ. ಏಕೆಂದರೆ ಅವರು ಇಷ್ಟಪಟ್ಟ ಊಟ, ಬಟ್ಟೆ, ವಸತಿ ಪೂರೈಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರ ಜೀವನ ಮಟ್ಟದಲ್ಲಿ ನೋಡಿದಾಗ ತುಂಬಾ ಕಳಪೆಯಾಗಿದೆ. ಭ್ರಷ್ಟಾಚಾರ, ಜಾತಿ ಪದ್ಧತಿ, ನಾಗರೀಕ ಪ್ರಜ್ಞೆ ಸಹ ಸಮಾಧಾನಕರ ಮಟ್ಟದಲ್ಲಿಲ್ಲ. ಒಟ್ಟಿನಲ್ಲಿ ಸಾಕಷ್ಟು ಬದಲಾವಣೆಗಳ ಅವಶ್ಯಕತೆ ಇದೆ…..

ವಿಶ್ವದಲ್ಲಿ ನಮಗಿಂತ ಹಿಂದುಳಿದ ಅನೇಕ ದೇಶಗಳು ಇವೆ, ಹಾಗೆಯೇ ನಮಗಿಂತ ಬಹಳಷ್ಟು ಮುಂದುವರಿದ ದೇಶಗಳು ಇವೆ, ಹೋಲಿಕೆ ಮಾಡಿಕೊಂಡು ಖುಷಿಪಡಬಹುದು, ಸಮಾಧಾನವಾಗಬಹುದು, ಅಥವಾ ಬೇಸರವೂ ಆಗಬಹುದು. ಆದರೆ ಅದೆಲ್ಲವನ್ನು ಮೀರಿ ನಮ್ಮನ್ನು ನಾವು ಉತ್ತಮಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು…..

ಸಣ್ಣ ಪ್ರಮಾಣದಲ್ಲೇ ಆದರೂ ನಾವು ಬದಲಾವಣೆಯತ್ತ ಸಾಗೋಣ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

42 minutes ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

1 hour ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

21 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

22 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago