Categories: ಲೇಖನ

ಭಾರತ ಸರ್ಕಾರದ ಅರ್ಥ ವ್ಯವಸ್ಥೆ ಅಂಕಿಅಂಶ

ಭಾರತದ ಒಟ್ಟು ವಿಸ್ತೀರ್ಣ ಸುಮಾರು 33 ಲಕ್ಷ ಚದರ ಕಿಲೋ ಮೀಟರ್ ಗಳು, ಭಾರತದ ಒಟ್ಟು ಜನಸಂಖ್ಯೆ ಸುಮಾರು 143 ಕೋಟಿ, ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 49 ಲಕ್ಷ ಕೋಟಿ, ಭಾರತದ ಒಟ್ಟು ಆದಾಯ ಸುಮಾರು 32 ಲಕ್ಷ ಕೋಟಿ, ಭಾರತದ ಒಟ್ಟು ಸಾಲ 182 ಲಕ್ಷ ಕೋಟಿ, ಭಾರತ ಕಟ್ಟುತ್ತಿರುವ ಸಾಲದ ಮೇಲಿನ ಬಡ್ಡಿ ಸುಮಾರು 11.5 ಲಕ್ಷ ಕೋಟಿ, ಭಾರತದ ಒಟ್ಟು ಆಂತರಿಕ ಉತ್ಪನ್ನ ಸುಮಾರು 298 ಲಕ್ಷ ಕೋಟಿ…….

ಇದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾಗ ಗಮನಿಸಿದ ಕುತೂಹಲಕರ ಅಂಶವನ್ನು, ನಮ್ಮ ದೇಶದ ಜನರ ಆರ್ಥಿಕ ಪರಿಸ್ಥಿತಿ ತಿಳಿಯಲು ಸಹಾಯ ಆಗಬಹುದು ಎಂದು ಇಲ್ಲಿ ಬರೆಯುತ್ತಿದ್ದೇನೆ.

ಇದರ ಆಧಾರದ ಮೇಲೆ ನಾವುಗಳು ಬಡವರೋ, ಶ್ರೀಮಂತರೋ ನೀವೇ ನಿರ್ಧರಿಸಿ. ಅಲ್ಲದೆ ಭಾರತದಲ್ಲಿ ಬಹುಶಃ ಲೆಕ್ಕಕ್ಕೆ ಸಿಗದ 3 – 4 ಕೋಟಿಗೂ ಹೆಚ್ಚು ಜನ ಇದ್ದಾರೆ ಮತ್ತು ಅಂಬಾನಿ, ಅದಾನಿ, ಟಾಟಾ, ಬಿರ್ಲಾ, ಅಜೀಂ ಪ್ರೇಮ್ಜಿ ಮುಂತಾದ ಬಹುದೊಡ್ಡ ಶ್ರೀಮಂತರು ಮತ್ತು ಊಟಕ್ಕೂ ಪರದಾಡುವ ಅನೇಕ ಬಡವರ ನಡುವಿನ ಅಂತರ ತುಂಬಾ ಇದೆ.

ಸುಮ್ಮನೆ ಭ್ರಮಾಲೋಕದಲ್ಲಿ ಯಾರೋ ಅಂಕಣಕಾರರು, ಭಾಷಣಕಾರರು, ಪ್ರವಚನಕಾರರುಗಳು ಹೇಳುವುದು ಭಾರತ ವಿಶ್ವದ ಬಲಿಷ್ಠ ದೇಶ ಎಂದು.

ವೈಯಕ್ತಿಕವಾಗಿ ಹೇಳಬೇಕೆಂದರೆ ಈ ಅಂಕಿಅಂಶಗಳಿಗಿಂತ ಹೆಚ್ಚಿನ ಬಡತನ ಭಾರತದಲ್ಲಿ ಇದೆ.

ಈ ಅಂಶಗಳನ್ನು ನಾವು ಸರಿಯಾಗಿ ಅರ್ಥಮಾಡಿಕೊಂಡರೆ ನಾವು ಸಾಗಬೇಕಾದ ಹಾದಿ, ನಮ್ಮ ಆದ್ಯತಾ ವಲಯಗಳು, ಅದಕ್ಕಾಗಿ ನಾವು ಪಡಬೇಕಾಗಿರುವ ಶ್ರಮ, ನಮ್ಮ ಜವಾಬ್ದಾರಿ ಎಲ್ಲವೂ ಸ್ಪಷ್ಟವಾಗುತ್ತದೆ.

ಚುನಾವಣೆ ಗೆಲ್ಲುವುದೇ ಒಂದು ದೊಡ್ಡ ಸಾಧನೆ ಎಂದು ನಮ್ಮ ರಾಜಕೀಯ ಪಕ್ಷಗಳು ಭಾವಿಸುವುದಾದರೆ ನಮ್ಮ ನಿಜವಾದ ಅಭಿವೃದ್ಧಿ ಕನಸೇ ಆಗಬಹುದು.

ಯಾರೋ ಎಲ್ಲಿಂದಲೋ ನೀಡುವ ಅಂಕಿ ಅಂಶಗಳಿಗಿಂತ ನಾವು ನಮ್ಮ ಸುತ್ತಮುತ್ತ ಗಮನಿಸುವ ಸಾಮಾಜಿಕ ಆರ್ಥಿಕ ಪರಿಸ್ಥಿತಿಯೇ ನಿಜವಾದ ವರದಿಗಳು. ಆ ಪ್ರಕಾರ ಎಷ್ಟೋ ಜನ ಇನ್ನೂ ಅಪೌಷ್ಟಿಕತೆಯಿಂದ ನರಳುತ್ತಿರುವುದನ್ನು ಕಾಣುತ್ತೇವೆ. ಏಕೆಂದರೆ ಅವರು ಇಷ್ಟಪಟ್ಟ ಊಟ, ಬಟ್ಟೆ, ವಸತಿ ಪೂರೈಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರ ಜೀವನ ಮಟ್ಟದಲ್ಲಿ ನೋಡಿದಾಗ ತುಂಬಾ ಕಳಪೆಯಾಗಿದೆ. ಭ್ರಷ್ಟಾಚಾರ, ಜಾತಿ ಪದ್ಧತಿ, ನಾಗರೀಕ ಪ್ರಜ್ಞೆ ಸಹ ಸಮಾಧಾನಕರ ಮಟ್ಟದಲ್ಲಿಲ್ಲ. ಒಟ್ಟಿನಲ್ಲಿ ಸಾಕಷ್ಟು ಬದಲಾವಣೆಗಳ ಅವಶ್ಯಕತೆ ಇದೆ…..

ವಿಶ್ವದಲ್ಲಿ ನಮಗಿಂತ ಹಿಂದುಳಿದ ಅನೇಕ ದೇಶಗಳು ಇವೆ, ಹಾಗೆಯೇ ನಮಗಿಂತ ಬಹಳಷ್ಟು ಮುಂದುವರಿದ ದೇಶಗಳು ಇವೆ, ಹೋಲಿಕೆ ಮಾಡಿಕೊಂಡು ಖುಷಿಪಡಬಹುದು, ಸಮಾಧಾನವಾಗಬಹುದು, ಅಥವಾ ಬೇಸರವೂ ಆಗಬಹುದು. ಆದರೆ ಅದೆಲ್ಲವನ್ನು ಮೀರಿ ನಮ್ಮನ್ನು ನಾವು ಉತ್ತಮಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು…..

ಸಣ್ಣ ಪ್ರಮಾಣದಲ್ಲೇ ಆದರೂ ನಾವು ಬದಲಾವಣೆಯತ್ತ ಸಾಗೋಣ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

18 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

19 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

24 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago