ಭಾರತ ಸರ್ಕಾರದ ಹಣಕಾಸು ಸೇರ್ಪಡೆ ಪರಿಪೂರ್ಣ ಕಾರ್ಯಕ್ರಮ

ಭಾರತ ಸರ್ಕಾರದ ಹಣಕಾಸು ಸೇರ್ಪಡೆ ಪರಿಪೂರ್ಣ ಶಿಬಿರದಲ್ಲಿ ಅನ್ ಲೈನ್ ಹಣ ಕಬಳಿಕೆ ಬಗ್ಗೆ ಅರಿವು ಮೂಡಿಸಿದ್ದೇವೆ, ಈ ಶಿಬಿರವು ಕೇಂದ್ರ ಸರ್ಕಾರದ ಆರ್ಥಿಕ ಸೇವೆಗಳ ಇಲಾಖೆ ಅಡಿಯ ಜನ್ ಸುರಕ್ಷಾ ಶಿಬಿರವಾಗಿದೆ. ಸ್ಥಳದಲ್ಲಿ ರೀ. ಕೆವೈಸಿ ಉಪಕ್ರಮ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಜನಧನ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪಿಎಂ ಜೀವನಜ್ಯೋತಿ ವಿಮಾ ಯೋಜನೆ, ಪಿಎಂ ಸುರಕ್ಷಾ ವಿಮಾ ಯೋಜನೆ, ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ಕುರಿತು ಅರಿವು ಮೂಡಿಸುವುದಾಗಿದೆ ಎಂದು ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಸತ್ಯನಾರಾಯಣ ರಾಜು ಹೇಳಿದರು.

ಭಾರತ ಸರಕಾರದ ಹಣಕಾಸು ಸೇರ್ಪಡೆ ಪರಿಪೂರ್ಣ ಕಾರ್ಯಕ್ರಮವನ್ನು ಕೆನೆರಾ ಬ್ಯಾಂಕ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾರ್ಗದರ್ಶಿ(ಲೀಡ್) ಬ್ಯಾಂಕ್ ಸಹಯೋಗದಲ್ಲಿ ಬೃಹತ್ ಶಿಬಿರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಹೊರವಲಯದ ಕೃಷಿ ಕುಟೀರ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿ‌ ಮಾತನಾಡಿದ ಅವರು, ಶಿಬಿರದಲ್ಲಿ ಸುಮಾರು 12 ಫಲಾನುಭವಿಗಳಿಗೆ ಪಿ.ಎಂ.ಸುರಕ್ಷಾ ವಿಮಾ ಯೋಜನೆ, ಪಿ.ಎಂ.ಜೀವನಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಲಾ 2 ಲಕ್ಷ ಚೆಕ್ ವಿತರಣೆ ಮಾಡಿ, ಸ್ಥಳದಲ್ಲೆ 60 ಅರ್ಜಿ ನಮೂನೆಗಳು ವಿತರಿಸಲಾಗಿದೆ‌ ಎಂದರು.

ನಂತರ ಆರ್.ಬಿ.ಐ. ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸಿನ್ಹಾ ಗುಪ್ತಾ ಮಾತನಾಡಿ, ಸಾರ್ವಜನಿಕರೇಲ್ಲರೂ ಬ್ಯಾಂಕಿನ ಖಾತೆ ಹೊಂದಬೇಕು. ಜನ್ ಧನ್ ಖಾತೆ ಕೈಗೊಂಡು 10 ವರ್ಷವಾಗಿದ್ದಾರೆ ರಿ ಕೆವೈಸಿ ಕೈಗೊಳ್ಳಬೇಕು. ಡಿಜಿಟಲ್ ಹಣಕಾಸು ವಂಚನೆಯಿಂದ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು. ಅಟಲ್ ಪಿಂಚಣಿ ಯೋಜನೆ, ಪಿಎಂ ಜೀವನಜ್ಯೋತಿ ವಿಮಾ ಯೋಜನೆ, ಪಿಎಂ ಸುರಕ್ಷಾ ವಿಮಾ ಯೋಜನೆ, ಡಿಜಿಟಲ್ ಹಣಕಾಸು ವಂಚನೆ ಬಗ್ಗೆ ಜಾಗೃತೆಯಿಂದ ಇರಬೇಕು ಎಂದರು.

ಬೆಂ.ಗ್ರಾ.ಜಿಲ್ಲಾ ಬ್ಯಾಂಕ್ ನ ಎಜಿಎಂ ಕೃಷ್ಣ ಚೈತನ್ಯ ರೆಡ್ಡಿ ಮಾತನಾಡಿ, ಇಂದು ಈ ಶಿಬಿರದಲ್ಲಿ ಗ್ರಾಹಕರಿಗೆ ಕೇಂದ್ರ ಸರಕಾರದ ಎಲ್ಲಾ ವಿಮಾ ಯೋಜನೆ ತಿಳಿಸಲಾಗಿದೆ. ಸ್ಥಳದಲ್ಲೇ ಗ್ರಾಹಕ ಸೇವಾ ಪ್ರತಿನಿಧಿಯಿಂದ ವಿಮೆ ಕೈಗೊಳ್ಳುವ ಅರ್ಜಿಗಳನ್ನು ಉಚಿತವಾಗಿ ವಿತರಿಸಿ, ದಾಖಲಾತಿ ಸಂಗ್ರಹಿಸಿದ್ದೇವೆ. ಆರ್.ಬಿ.ಐ. ಮುಖ್ಯಸ್ಥೆ ಸಹ ಕಾರ್ಯಕ್ರಮಕ್ಕೆ ಆಗಮಿಸಿದ್ದು ಸಂತಸ ತಂದಿದೆ ಎಂದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ರಾಮಾಂಜಿ ಮಾತನಾಡಿ, ಸ್ಥಳದಲ್ಲೇ ಈ ಶಿಬಿರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗಿದೆ, ಕೇಂದ್ರ ಸರಕಾರದ ಯೋಜನೆಯನ್ನು ಜನರು ಅರ್ಥೈಸಿಕೊಂಡಿದ್ದಾರೆ, 600 ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ, ಇದಕ್ಕೆ ಜನ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ಬೆಂ.ಗ್ರಾ.ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಜಯಶೇಖರ್ ಮಾತನಾಡಿ, ಕೇಂದ್ರ ಸರಕಾರದ ಪ್ರಧಾನ ಮಂತ್ರಿ ವಿಮಾ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದೆ, ಡಿಜಿಟಲ್ ಬ್ಯಾಂಕಿಂಗ್ ನ ಉಪಯೋಗ ಮತ್ತು ದುರುಪಯೋಗದ ಬಗ್ಗೆ ತಿಳಿಸಿದ್ದೇವೆ, ಡಿಜಿಟಲ್ ಬ್ಯಾಂಕಿಂಗ್ ನಲ್ಲಿ ಹಣ ತೊಂದರೆಯಾದಾಗ 1930 ದೂರವಾಣಿ ಮಾಡಬಹುದು, ಇಂದು ಸುಮಾರು ಸಾವಿರಾರು ಮಹಿಳೆಯರಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ವಿಮಾ ಯೋಜನೆ ಬಗ್ಗೆ ತಿಳಿಸಿದ್ದೇವೆ, ಆರ್.ಬಿ.ಐ. ಬ್ಯಾಂಕ್ ಮುಖ್ಯಸ್ಥರು ಮತ್ತು ಸಿಬ್ಬಂದಿ ಆಗಮಿಸಿರುವುದು ಸಂತಸವಾಗಿದೆ, ಜೊತೆಗೆ ಕೊಡಿಗೇಹಳ್ಳಿ ಗ್ರಾ.ಪಂ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಲಾಭ ಪಡೆದರು, 12 ಫಲಾನುಭವಿಗಳಿಗೆ ಚೆಕ್ ವಿತರಿಸಿದ್ದೇವೆ ಎಂದರು.

ಕೊಡಿಗೇಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಆಶಾರಾಣಿ ಮಾತನಾಡಿ, ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನರು, ರೈತರಿಗೆ, ಮಹಿಳೆಯರಿಗೆ ಇಂದಿನ ಶಿಬಿರದ ಸಹಕಾರ ಪಡೆದಿದ್ದಾರೆ, ಫಲಾನುಭವಿಗಳಿಗೆ 2 ಲಕ್ಷ ದೊರೆತಿರುವುದು ಬೇರೆಯವರಿಗೆ ವಿಮೆ ಪ್ರಾರಂಭಿಸಲು ಉತ್ಸಾಹ ಬಂದಿದೆ, ಕೇಂದ್ರ ಸರಕಾರದ ಯೋಜನೆಯ ಗ್ರಾಮೀಣರಿಗೆ ಸಹಕಾರಿಯಾಗಿದೆ ಎಂದರು.

ಫಲಾನುಭವಿಗಳಾದ ಗಂಗಗುಡ್ಡಯ್ಯ, ಲಕ್ಷ್ಮೀ
ಮಾತನಾಡಿ, ಈ ಕೇಂದ್ರ ಸರಕಾರದ ಯೋಜನೆಯಿಂದ 2 ಲಕ್ಷ ನಮಗೆ ವಿಮೆ ಮೊತ್ತವಾಗಿದ್ದು, ನನ್ನ ಪತ್ನಿ ಯೋಜನೆ ಕೈಗೊಂಡು ಮೃತರಾದ ಹಿನ್ನಲೆ, ಈ 2 ಲಕ್ಷ ಹಣವನ್ನು ಮಗಳ ಮದುವೆಗೆ ಹಾಗೂ ಮಗನ ವಿದ್ಯಾಭ್ಯಾಸಕ್ಕೆ ಬಳಸಿರುವೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಬಿ.ಐ. ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸಿನ್ಹಾ ಗುಪ್ತ, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಸತ್ಯನಾರಾಯಣ ರಾಜು, ಬೆಂ.ಗ್ರಾ.ಜಿಲ್ಲಾ ಎ.ಡಿ.ಸಿ. ಸಯ್ಯಾದ್ ಆಯಿಷಾ, ಕೆನರಾ ಬ್ಯಾಂಕ್ ಸಿಜಿಎಂ ಮಹೇಶ್ ಪೈ, ಭಾಸ್ಕರ್ ಚಕ್ರಮರ್ತಿ, ಕೃಷ್ಣ ಚೈತನ್ಯ ರೆಡ್ಡಿ, ಗ್ರಾ.ಪಂ. ಪಂಚಾಯತಿ ಅಧ್ಯಕ್ಷರಾದ ಆಶಾರಾಣಿ, ಮಂಜುನಾಥ್ ಇನ್ನೀತರರಿದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago