ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ 2025ನೇ ಸಾಲಿನ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ವಿದೇಶಿ ಆಟಗಾರರು ಕೂಡ ಐಪಿಎಲ್ ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಪಂಜಾಬ್ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್ಗೆ ಫ್ಲಡ್ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…