ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ ಬಳಿ ಕುಳಿತಿದ್ದ ವ್ಯಕ್ತಿ ಮೇಲೆ ಬಿದ್ದಿದ್ದು, ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸುವಾಗ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ಮೇಡಿಹಳ್ಳಿ ನಿವಾಸಿ ವೆಂಕಟರಮಣಪ್ಪ (56)ಮೃತ ದುರ್ದೈವಿ.
ಅರಳಿಮರ ಕೆಳಗೆ ಪೆಟ್ಟಿಅಂಗಡಿ ಇಡಲಾಗಿದೆ. ಎಂದಿನಂತೆ ಈದಿನವೂ ಸಹ ಅಂಗಡಿ ಬಳಿ ಬಂದು ವೆಂಕಟರಮಣಪ್ಪ ಕುಳಿತಿಕೊಳ್ಳುತ್ತಿದ್ದ. ದುರದೃಷ್ಟವಶಾತ್ ಇಂದು ಬೀಸಿದ ಬಿರುಗಾಳಿಗೆ ಒಣಗಿದ್ದ ಅರಳಿಮರದ ಕೊಂಬೆ ವ್ಯಕ್ತಿ ಮೇಲೆ ಬಿದ್ದಿದೆ. ಪೆಟ್ಟಿಅಂಗಡಿ ಒಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿರುವ ಒಣಗಿರುವ ಮರಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಟನಕುಂಟೆ ಗ್ರಾಮಪಂಚಾಯಿತಿಗೆ ತಿಳಿಸಿಲಾಗಿತ್ತು. ಆದರೆ ನಮ್ಮ ಮನವಿಗೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದೀಗ ಒಂದು ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ….
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…