ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ ಬಳಿ ಕುಳಿತಿದ್ದ ವ್ಯಕ್ತಿ ಮೇಲೆ ಬಿದ್ದಿದ್ದು, ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸುವಾಗ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ಮೇಡಿಹಳ್ಳಿ ನಿವಾಸಿ ವೆಂಕಟರಮಣಪ್ಪ (56)ಮೃತ ದುರ್ದೈವಿ.
ಅರಳಿಮರ ಕೆಳಗೆ ಪೆಟ್ಟಿಅಂಗಡಿ ಇಡಲಾಗಿದೆ. ಎಂದಿನಂತೆ ಈದಿನವೂ ಸಹ ಅಂಗಡಿ ಬಳಿ ಬಂದು ವೆಂಕಟರಮಣಪ್ಪ ಕುಳಿತಿಕೊಳ್ಳುತ್ತಿದ್ದ. ದುರದೃಷ್ಟವಶಾತ್ ಇಂದು ಬೀಸಿದ ಬಿರುಗಾಳಿಗೆ ಒಣಗಿದ್ದ ಅರಳಿಮರದ ಕೊಂಬೆ ವ್ಯಕ್ತಿ ಮೇಲೆ ಬಿದ್ದಿದೆ. ಪೆಟ್ಟಿಅಂಗಡಿ ಒಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿರುವ ಒಣಗಿರುವ ಮರಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಟನಕುಂಟೆ ಗ್ರಾಮಪಂಚಾಯಿತಿಗೆ ತಿಳಿಸಿಲಾಗಿತ್ತು. ಆದರೆ ನಮ್ಮ ಮನವಿಗೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದೀಗ ಒಂದು ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ….
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…