ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ ಬಳಿ ಕುಳಿತಿದ್ದ ವ್ಯಕ್ತಿ ಮೇಲೆ ಬಿದ್ದಿದ್ದು, ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸುವಾಗ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ಮೇಡಿಹಳ್ಳಿ ನಿವಾಸಿ ವೆಂಕಟರಮಣಪ್ಪ (56)ಮೃತ ದುರ್ದೈವಿ.
ಅರಳಿಮರ ಕೆಳಗೆ ಪೆಟ್ಟಿಅಂಗಡಿ ಇಡಲಾಗಿದೆ. ಎಂದಿನಂತೆ ಈದಿನವೂ ಸಹ ಅಂಗಡಿ ಬಳಿ ಬಂದು ವೆಂಕಟರಮಣಪ್ಪ ಕುಳಿತಿಕೊಳ್ಳುತ್ತಿದ್ದ. ದುರದೃಷ್ಟವಶಾತ್ ಇಂದು ಬೀಸಿದ ಬಿರುಗಾಳಿಗೆ ಒಣಗಿದ್ದ ಅರಳಿಮರದ ಕೊಂಬೆ ವ್ಯಕ್ತಿ ಮೇಲೆ ಬಿದ್ದಿದೆ. ಪೆಟ್ಟಿಅಂಗಡಿ ಒಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿರುವ ಒಣಗಿರುವ ಮರಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಟನಕುಂಟೆ ಗ್ರಾಮಪಂಚಾಯಿತಿಗೆ ತಿಳಿಸಿಲಾಗಿತ್ತು. ಆದರೆ ನಮ್ಮ ಮನವಿಗೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದೀಗ ಒಂದು ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ….
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…