ಭಾರೀ ಮಳೆ: ಮನೆಗಳಿಗೆ ನುಗ್ಗಿದ ಚರಂಡಿ‌ ನೀರು ಮಿಶ್ರಿತ ಮಳೆ‌ ನೀರು: ಮನೆಗಳಲ್ಲಿನ ದವಸ ಧಾನ್ಯ ನೀರು ಪಾಲು

ಇಂದು ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಭಾರೀ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.

ಹಾಡೋನಹಳ್ಳಿ ಗ್ರಾಮ‌ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿಯಲ್ಲಿ ಚರಂಡಿ ಸ್ವಚ್ಛಗೊಳಿಸಿ ಹಲವು‌ ತಿಂಗಳುಗಳೇ ಕಳೆದಿವೆ. ಇದರ ಪರಿಣಾಮ ಇಂದು ಮಳೆಯಾದ ಹಿನ್ನೆಲೆ ನೇರವಾಗಿ ಚರಂಡಿ ನೀರು ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿ ದವಸಧಾನ್ಯ ನೀರು ಪಾಲಾಗಿವೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ಪಂಚಾಯತಿ ಸದಸ್ಯೆ ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತ ಪರಿಸ್ಥಿರಿ ನಿರ್ಮಾಣವಾಗಿದೆ.

ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಗ್ರಾಮಸ್ಥರ‌ ಮನವಿಗೆ ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಸ್ಪಂದಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ.

ಈಗಾಲಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು‌ ಕಾಲಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

5 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

6 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

11 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

12 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

17 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

18 hours ago