ಇಂದು ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಭಾರೀ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿಯಲ್ಲಿ ಚರಂಡಿ ಸ್ವಚ್ಛಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಇದರ ಪರಿಣಾಮ ಇಂದು ಮಳೆಯಾದ ಹಿನ್ನೆಲೆ ನೇರವಾಗಿ ಚರಂಡಿ ನೀರು ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿ ದವಸಧಾನ್ಯ ನೀರು ಪಾಲಾಗಿವೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ಪಂಚಾಯತಿ ಸದಸ್ಯೆ ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತ ಪರಿಸ್ಥಿರಿ ನಿರ್ಮಾಣವಾಗಿದೆ.
ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಗ್ರಾಮಸ್ಥರ ಮನವಿಗೆ ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಸ್ಪಂದಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ.
ಈಗಾಲಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಕಾಲಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…