ಇಂದು ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಭಾರೀ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿಯಲ್ಲಿ ಚರಂಡಿ ಸ್ವಚ್ಛಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಇದರ ಪರಿಣಾಮ ಇಂದು ಮಳೆಯಾದ ಹಿನ್ನೆಲೆ ನೇರವಾಗಿ ಚರಂಡಿ ನೀರು ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿ ದವಸಧಾನ್ಯ ನೀರು ಪಾಲಾಗಿವೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ಪಂಚಾಯತಿ ಸದಸ್ಯೆ ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತ ಪರಿಸ್ಥಿರಿ ನಿರ್ಮಾಣವಾಗಿದೆ.
ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಗ್ರಾಮಸ್ಥರ ಮನವಿಗೆ ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಸ್ಪಂದಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ.
ಈಗಾಲಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಕಾಲಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…