ಇಂದು ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಭಾರೀ ಮಳೆಗೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ನಡೆದಿದೆ.
ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿಯಲ್ಲಿ ಚರಂಡಿ ಸ್ವಚ್ಛಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಇದರ ಪರಿಣಾಮ ಇಂದು ಮಳೆಯಾದ ಹಿನ್ನೆಲೆ ನೇರವಾಗಿ ಚರಂಡಿ ನೀರು ಮಿಶ್ರಿತ ಮಳೆ ನೀರು ಮನೆಗಳಿಗೆ ನುಗ್ಗಿ ದವಸಧಾನ್ಯ ನೀರು ಪಾಲಾಗಿವೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದ ಆಂಜಿನಮ್ಮ ಮತ್ತು ವಿಜಿಯಮ್ಮ, ಪಂಚಾಯತಿ ಸದಸ್ಯೆ ನಂಜಮ್ಮ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತ ಪರಿಸ್ಥಿರಿ ನಿರ್ಮಾಣವಾಗಿದೆ.
ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಗ್ರಾಮಸ್ಥರ ಮನವಿಗೆ ಹಾಡೋನಹಳ್ಳಿ ಪಂಚಾಯತಿ ಅಧಿಕಾರಿಗಳು ಸ್ಪಂದಿಸದ ಕಾರಣ ಈ ಅವಾಂತರ ಸೃಷ್ಟಿಯಾಗಿದೆ.
ಈಗಾಲಾದರೂ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಕಾಲಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…