ಭಾವಚಿತ್ರ ಇರುವ 2024ರ ಮತದಾರರ ಕರಡು ಪಟ್ಟಿಯನ್ನು ಶುಕ್ರವಾರ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಕಚೇರಿ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಅಲ್ಲದೇ ಎಲ್ಲಾ ರಾಜಕೀಯ ಪಕ್ಷಗಳಿಗೂ ಉಚಿತವಾಗಿ ಒಂದು ಪ್ರತಿಯನ್ನು ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷವು ನಿರಂತರವಾಗಿ ನಡೆಯಲಿದೆ. ಇದರಂತೆ 2024ರ ಮತದಾರರ ಪಟ್ಟಿ ಪರಿಷ್ಕರಣೆಗೆ ಕರಡು ಪ್ರತಿಯನ್ನು ಪ್ರಕಟಿಸಲಾಗಿದೆ. ಮತದಾರರ ಕರಡು ಪಟ್ಟಿಯ ಕುರಿತಂತೆ ಆಕ್ಷೇಪಣೆಗಳು ಇದ್ದರೆ ನಿಗದಿತ ನಮೂನೆಯಲ್ಲಿ ಡಿಸೆಂಬರ್ 9ರ ಒಳಗೆ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.
ಇದಲ್ಲದೆ ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ರಂದು ವಿಶೇಷ ಮತಗಟ್ಟೆ ಆಂದೋಲನಗಳನ್ನು ನಡೆಸಲಾಗುವುದು. ಮತದಾರರು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಂದ ಬಂದಿರುವ ಆಕ್ಷೇಪಣೆಗಳನ್ನು ಡಿಸೆಂಬರ್ 26ರ ಒಳಗೆ ಇತ್ಯರ್ಥಗೊಳಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು 2024ರ ಜನವರಿ 5 ರಂದು ಪ್ರಕಟಿಸಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಿ.ಎಸ್.ರವಿಕಮಾರ್ ಮಾತನಾಡಿ, ಮತದಾರರ ಗುರುತಿನ ಚೀಟಿಗಳು ಅಂಚೆ ಮೂಲಕ ಮತದಾರರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಆದರೆ ಅಂಚೆ ಇಲಾಖೆಯವರು ಮತದಾರರ ಮನೆಗಳಿಗೆ ತಲುಪಿಸದೆ ಮತಗಟ್ಟೆ ಅಧಿಕಾರಿಗಳಿಗೆ ನೀಡುತ್ತಿದ್ದಾರೆ. ಇದರಿಂದ ಮತದಾರರು ಗುರುತಿನ ಚೀಟಿ ಬರದಿದ್ದರೆ ಯಾರನ್ನು ಕೇಳಬೇಕು ಎನ್ನುವ ಗೊಂದಲವನ್ನು ನಿವಾರಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗೋವಿಂದರಾಜು, ಬಿಜೆಪಿ ಮುಖಂಡ ಮಂಜುನಾಥ್ ಮಾತನಾಡಿ, ರಾಜಕೀಯ ಪಕ್ಷಗಳ ವತಿಯಂದ ಅಧಿಕೃತವಾಗಿ ನೇಮಿಸಿಕೊಳ್ಳಲಾಗಿರುವ ವ್ಯಕ್ತಿಗಳಿಗೆ ಬಿಎಲ್ಒ-2 ಗುರುತಿಚಿನ ಚೀಟಿಗಳನ್ನು ತಾಲ್ಲೂಕು ಚುನಾವಣ ಶಾಖೆಯಿಂದ ವಿತರಿಸಬೇಕು. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಮತದಾರರ ನೋಂದಣಿ ಸೇರಿದಂತೆ ಹಲವಾರು ಸಮಸ್ಯೆಗಳು ಪರಿಹಾರವಾಗಲಿವೆ ಎಂದರು.
ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್, ಚುನಾವಣ ಶಿರಸ್ತೆದಾರ್ ಕಿರಣ್ ಕುಮಾರ್, ಉಪವಿಭಾಗಾಧಿಕಾರಿಗಳ ಚುನಾವಣ ವಿಭಾಗದ ರಘುನಂದನ್ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…