ಭಾವಚಿತ್ರ ಇರುವ 2024ರ ಮತದಾರರ ಕರಡು ಪಟ್ಟಿಯನ್ನು ಶುಕ್ರವಾರ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಕಚೇರಿ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಅಲ್ಲದೇ ಎಲ್ಲಾ ರಾಜಕೀಯ ಪಕ್ಷಗಳಿಗೂ ಉಚಿತವಾಗಿ ಒಂದು ಪ್ರತಿಯನ್ನು ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ರೀನಿವಾಸ್ ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷವು ನಿರಂತರವಾಗಿ ನಡೆಯಲಿದೆ. ಇದರಂತೆ 2024ರ ಮತದಾರರ ಪಟ್ಟಿ ಪರಿಷ್ಕರಣೆಗೆ ಕರಡು ಪ್ರತಿಯನ್ನು ಪ್ರಕಟಿಸಲಾಗಿದೆ. ಮತದಾರರ ಕರಡು ಪಟ್ಟಿಯ ಕುರಿತಂತೆ ಆಕ್ಷೇಪಣೆಗಳು ಇದ್ದರೆ ನಿಗದಿತ ನಮೂನೆಯಲ್ಲಿ ಡಿಸೆಂಬರ್ 9ರ ಒಳಗೆ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.
ಇದಲ್ಲದೆ ನವೆಂಬರ್ 18 ಮತ್ತು 19 ಹಾಗೂ ಡಿಸೆಂಬರ್ 2 ರಂದು ವಿಶೇಷ ಮತಗಟ್ಟೆ ಆಂದೋಲನಗಳನ್ನು ನಡೆಸಲಾಗುವುದು. ಮತದಾರರು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಂದ ಬಂದಿರುವ ಆಕ್ಷೇಪಣೆಗಳನ್ನು ಡಿಸೆಂಬರ್ 26ರ ಒಳಗೆ ಇತ್ಯರ್ಥಗೊಳಿಸಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು 2024ರ ಜನವರಿ 5 ರಂದು ಪ್ರಕಟಿಸಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಿ.ಎಸ್.ರವಿಕಮಾರ್ ಮಾತನಾಡಿ, ಮತದಾರರ ಗುರುತಿನ ಚೀಟಿಗಳು ಅಂಚೆ ಮೂಲಕ ಮತದಾರರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಆದರೆ ಅಂಚೆ ಇಲಾಖೆಯವರು ಮತದಾರರ ಮನೆಗಳಿಗೆ ತಲುಪಿಸದೆ ಮತಗಟ್ಟೆ ಅಧಿಕಾರಿಗಳಿಗೆ ನೀಡುತ್ತಿದ್ದಾರೆ. ಇದರಿಂದ ಮತದಾರರು ಗುರುತಿನ ಚೀಟಿ ಬರದಿದ್ದರೆ ಯಾರನ್ನು ಕೇಳಬೇಕು ಎನ್ನುವ ಗೊಂದಲವನ್ನು ನಿವಾರಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗೋವಿಂದರಾಜು, ಬಿಜೆಪಿ ಮುಖಂಡ ಮಂಜುನಾಥ್ ಮಾತನಾಡಿ, ರಾಜಕೀಯ ಪಕ್ಷಗಳ ವತಿಯಂದ ಅಧಿಕೃತವಾಗಿ ನೇಮಿಸಿಕೊಳ್ಳಲಾಗಿರುವ ವ್ಯಕ್ತಿಗಳಿಗೆ ಬಿಎಲ್ಒ-2 ಗುರುತಿಚಿನ ಚೀಟಿಗಳನ್ನು ತಾಲ್ಲೂಕು ಚುನಾವಣ ಶಾಖೆಯಿಂದ ವಿತರಿಸಬೇಕು. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಮತದಾರರ ನೋಂದಣಿ ಸೇರಿದಂತೆ ಹಲವಾರು ಸಮಸ್ಯೆಗಳು ಪರಿಹಾರವಾಗಲಿವೆ ಎಂದರು.
ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್, ಚುನಾವಣ ಶಿರಸ್ತೆದಾರ್ ಕಿರಣ್ ಕುಮಾರ್, ಉಪವಿಭಾಗಾಧಿಕಾರಿಗಳ ಚುನಾವಣ ವಿಭಾಗದ ರಘುನಂದನ್ ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…