ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ ಎಂದು ತಿಳಿಸಿದ್ದಾರೆ.
ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ ಎಂದರು.
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ದಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ಹೇಳಿದರು.
ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು ಎಂದರು.
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ ಎಂದರು.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.
ನಿಮಗೆ ಸದಾ ಯಶಸ್ಸು ಸಿಗಲಿ ಡಿಕೆ ಶಿವಕುಮಾರ್ ಎಂದು ಶುಭ ಹಾರೈಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…