ಭಾವಿ ಸಿಎಂ ಡಿಕೆಶಿಗೆ ಸಿದ್ದರಾಮಯ್ಯ ಶುಭ ಹಾರೈಕೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ ಎಂದು ತಿಳಿಸಿದ್ದಾರೆ.

ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ ಎಂದರು.

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು  ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ದ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ದಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ದಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ಹೇಳಿದರು.

ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.

 

ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ  ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ  ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು ಎಂದರು.

ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ ಎಂದರು.

ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ  ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

ನಿಮಗೆ ಸದಾ ಯಶಸ್ಸು ಸಿಗಲಿ ಡಿಕೆ ಶಿವಕುಮಾರ್ ಎಂದು ಶುಭ‌ ಹಾರೈಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

8 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago