ಬೆಂಗಳೂರು ನಗರ ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ಕಾರ್ಯಾಚರಣೆ ಮೂಲಕ ಬೆಂಗಳೂರಿನ ಪುಲಕೇಶಿ ನಗರ ಪಿಎಸ್ ವ್ಯಾಪ್ತಿಯಲ್ಲಿ ಭಿಕ್ಷಾಟನೆ ದಂಧೆಯಿಂದ 47 ಅಪ್ರಾಪ್ತ ಮಕ್ಕಳನ್ನು ರಕ್ಷಿಸಲಾಗಿದೆ. ಅದೇರೀತಿ ಕ್ಷಿಪ್ರ ಕ್ರಮದಿಂದಾಗಿ ದಂಧೆಯಲ್ಲಿ ತೊಡಗಿದ್ದ 36 ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮಾಹಿತಿ ನೀಡಿದರು.
ಏ.8ರಂದು ಬಸವನಗುಡಿ ಪಿಎಸ್ ಎನ್ ಆರ್ ಕಾಲೋನಿ ಮತ್ತು ಸನ್ನಿಧಿ ರಸ್ತೆಯಲ್ಲಿ ದೀರ್ಘಕಾಲ ತಲೆಮರೆಸಿಕೊಂಡಿದ್ದ 2 ಮಂದಿಯನ್ನು ಬಂಧಿಸಿದ್ದಾರೆ. ಎನ್ಆರ್ ಕಾಲೋನಿ ಶಂಕಿತ ಆರೋಪಿ, 8 ವರ್ಷಗಳಿಂದ ಪರಾರಿಯಾಗಿದ್ದು, 2012 ರಲ್ಲಿ ಡಕಾಯಿತಿ ಪ್ರಕರಣ ಮತ್ತು 2009 ರಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಬೆಂಗಳೂರು ನಗರ ಮತ್ತು ತಮಿಳುನಾಡಿನಲ್ಲಿ 10 ದಾಖಲಾದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅದೇ ರೀತಿ, ಸನ್ನಿಧಿ ರಸ್ತೆಯ ಬಂಧಿತನು ಸಹ 8 ವರ್ಷಗಳಿಂದ ಪರಾರಿಯಾಗಿದ್ದು, ನಗರದ ವಿವಿಧ ಪಿಎಸ್ಗಳಲ್ಲಿ 15 ಪ್ರಕರಣಗಳಲ್ಲಿ ದಾಖಲಾಗಿದ್ದು, ಪ್ರಮುಖವಾಗಿ 2016 ರಲ್ಲಿ 02 ದರೋಡೆ ಪ್ರಕರಣಗಳು ಮತ್ತು 2017 ರಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…