ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.
ದೇವನಹಳ್ಳಿ ತಾಲ್ಲೂಕಿನ ತೆಲ್ಲಹಳ್ಳಿ ಗ್ರಾಮದ ಅರುಣ್ (35), ಅವರ ಪತ್ನಿ ಅನುಷಾ (32) ಹಾಗೂ ಎರಡು ವರ್ಷದ ಮಗಳು ಹರ್ನಾ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ಕುಟುಂಬದ ಮತ್ತೊಬ್ಬ ಮಗಳು ಅನುಷಿಕಾ (5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೂಲಿಬೆಲೆಯಿಂದ ದೇವನಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ವಾಹನಕ್ಕೆ, ಹೊಸಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ರಾಂಗ್ ರೂಟ್ನಲ್ಲಿ ಬಂದು ಅಪಘಾತಕ್ಕೆ ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು, ಅರುಣ್, ಅನುಷಾ ಹಾಗೂ ಮಗು ಹರ್ನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಅಪಘಾತದ ಮಾಹಿತಿ ತಿಳಿದು ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ಹಾಗೂ ಸೂಲಿಬೆಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…