ರಾಣಿ ಕ್ರಾಸ್ ಸಮೀಪ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಸಮೀಪ ಎಸ್‌ಟಿಆರ್‌ಆರ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ…

ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತ ದುರ್ದೈವಿಗಳು.

ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ‌ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್​​ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್​​ಪೋರ್ಟ್​​ನ ಟರ್ಮಿನಲ್​​ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ.

ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್​​ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್​​ನಲ್ಲಿ ಯೂಟರ್ನ್​​ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

ಯುದ್ಧ ನಿಲ್ಲಿಸಿ, ಭೂಮಿ ರಕ್ಷಿಸಿ, ಕದನ ವಿರಾಮ ಘೋಷಿಸಿ…

ವಿಶ್ವ ರಕ್ಷಣಾ ಆಂದೋಲನ..... ( GLOBAL PROTECTION MOVEMENT......) *********************** ಬದುಕಿರುವ ಮತ್ತು ಈಗಲೂ ಚಟುವಟಿಕೆಯಂದಿರುವ, ಶಾಂತಿಗಾಗಿ ನೊಬೆಲ್ ಪ್ರಶಸ್ತಿ…

30 minutes ago

ಕೋಲಾರದಲ್ಲಿ ಪವಿತ್ರ ರಂಜಾನ್‌ ಸಂಭ್ರಮದಿಂದ ಆಚರಣೆ

ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್‌ ಹಬ್ಬವನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶನಿವಾರ ಆಚರಣೆ ಮಾಡಲಾಯಿತು. ನಗರದ ಈದ್ಗಾ…

14 hours ago

ಕಣ್ಮನ ಸೆಳೆದ ವೀರತಿಪ್ಪಯ್ಯಸ್ವಾಮಿ ಜಾತ್ರೆಯ ನೀರುಬಂಡಿಗಳ ಮೆರವಣಿಗೆ

ತೂಬಗೆರೆ (ಕೆಳಗಿನ ಜೂಗನಹಳ್ಳಿ): ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಗೌರಿಬಿದನೂರು ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ…

14 hours ago

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

19 hours ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ  ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ…

19 hours ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

1 day ago