ರಾಣಿ ಕ್ರಾಸ್ ಸಮೀಪ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಸಮೀಪ ಎಸ್‌ಟಿಆರ್‌ಆರ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ…

ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತ ದುರ್ದೈವಿಗಳು.

ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ‌ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್​​ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್​​ಪೋರ್ಟ್​​ನ ಟರ್ಮಿನಲ್​​ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ.

ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್​​ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್​​ನಲ್ಲಿ ಯೂಟರ್ನ್​​ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

19 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago