ರಾಣಿ ಕ್ರಾಸ್ ಸಮೀಪ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಸಮೀಪ ಎಸ್‌ಟಿಆರ್‌ಆರ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ…

ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತ ದುರ್ದೈವಿಗಳು.

ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ‌ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್​​ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್​​ಪೋರ್ಟ್​​ನ ಟರ್ಮಿನಲ್​​ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ.

ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್​​ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್​​ನಲ್ಲಿ ಯೂಟರ್ನ್​​ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ…

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 hour ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

5 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

20 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago