ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸ್ಪಂದನಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮಹಿಳೆಯ ಶವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
2004ರಲ್ಲಿ ಸ್ಪಂದನಾ ಕಾಲೇಜಿಗೆ ಹೋಗ್ತಿರೋ ಸಮಯದಲ್ಲೇ ಅಭಿಷೇಕ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಗಂಡ ಅಭಿಷೇಕ್ ಕನಕಪುರದ ಕರಿಕಲ್ಲ ದೊಡ್ಡಿಯ ನಿವಾಸಿ ಆಗಿದ್ದು, ಕೆಲ ತಿಂಗಳಿಂದ ಅಂಚೆಪಾಳ್ಯ ಗ್ರಾಮದಲ್ಲಿಯೇ ವಾಸವಾಗಿದ್ದರು.
ಭೀಮನ ಅಮಾವಾಸ್ಯೆ ಪ್ರಯುಕ್ತ ಗಂಡನಿಗೆ ಪಾದಪೂಜೆ ಮಾಡಿದ ಸ್ಪಂದನಾ, ಅದಾದ ಕೆಲ ಹೊತ್ತಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಮದುವೆಯ ನಂತರ ವರದಕ್ಷಿಣೆಗಾಗಿ ಗಂಡ ಅಭಿಷೇಕ್ ಹಾಗೂ ಅವನ ತಾಯಿ ಲಕ್ಷ್ಮಮ್ಮ ಇವರಿಂದ ಸ್ಪಂದನಾ ನಿರಂತರ ಕಿರುಕುಳಕ್ಕೊಳಗಾಗುತ್ತಿದ್ದಾಳೆ ಎಂದು ಸ್ಪಂದನಾ ಪಾಲಕರು ಆರೋಪ ಮಾಡಿದ್ದಾರೆ.
ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವರದಕ್ಷಿಣೆ ತರುವಂತೆ ಗಂಡ ಮತ್ತು ಅತ್ತೆ ಟಾರ್ಚರ್ ಮಾಡಿದ್ದರು ಎಂದು ಸ್ಪಂದನಾ ತನ್ನ ತಂದೆಗೆ ಹೇಳಿದ್ದಳು. ಬಳಿಕ 5 ಲಕ್ಷ ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದೇವೆ. ಇದೀಗ ನಿನ್ನೆ ನನಗೆ ಕರೆ ಮಾಡಿ ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಅಂತಾ ಮಗಳು ಕಣ್ಣೀರಿಟ್ಟಿದ್ದಳು ಎಂದು ಸ್ಪಂದನಾ ತಂದೆ ಚಂದ್ರ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…