ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸ್ಪಂದನಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮಹಿಳೆಯ ಶವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
2004ರಲ್ಲಿ ಸ್ಪಂದನಾ ಕಾಲೇಜಿಗೆ ಹೋಗ್ತಿರೋ ಸಮಯದಲ್ಲೇ ಅಭಿಷೇಕ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಗಂಡ ಅಭಿಷೇಕ್ ಕನಕಪುರದ ಕರಿಕಲ್ಲ ದೊಡ್ಡಿಯ ನಿವಾಸಿ ಆಗಿದ್ದು, ಕೆಲ ತಿಂಗಳಿಂದ ಅಂಚೆಪಾಳ್ಯ ಗ್ರಾಮದಲ್ಲಿಯೇ ವಾಸವಾಗಿದ್ದರು.
ಭೀಮನ ಅಮಾವಾಸ್ಯೆ ಪ್ರಯುಕ್ತ ಗಂಡನಿಗೆ ಪಾದಪೂಜೆ ಮಾಡಿದ ಸ್ಪಂದನಾ, ಅದಾದ ಕೆಲ ಹೊತ್ತಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಮದುವೆಯ ನಂತರ ವರದಕ್ಷಿಣೆಗಾಗಿ ಗಂಡ ಅಭಿಷೇಕ್ ಹಾಗೂ ಅವನ ತಾಯಿ ಲಕ್ಷ್ಮಮ್ಮ ಇವರಿಂದ ಸ್ಪಂದನಾ ನಿರಂತರ ಕಿರುಕುಳಕ್ಕೊಳಗಾಗುತ್ತಿದ್ದಾಳೆ ಎಂದು ಸ್ಪಂದನಾ ಪಾಲಕರು ಆರೋಪ ಮಾಡಿದ್ದಾರೆ.
ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವರದಕ್ಷಿಣೆ ತರುವಂತೆ ಗಂಡ ಮತ್ತು ಅತ್ತೆ ಟಾರ್ಚರ್ ಮಾಡಿದ್ದರು ಎಂದು ಸ್ಪಂದನಾ ತನ್ನ ತಂದೆಗೆ ಹೇಳಿದ್ದಳು. ಬಳಿಕ 5 ಲಕ್ಷ ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದೇವೆ. ಇದೀಗ ನಿನ್ನೆ ನನಗೆ ಕರೆ ಮಾಡಿ ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಅಂತಾ ಮಗಳು ಕಣ್ಣೀರಿಟ್ಟಿದ್ದಳು ಎಂದು ಸ್ಪಂದನಾ ತಂದೆ ಚಂದ್ರ ಹೇಳಿದ್ದಾರೆ.
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…