ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಮ್ಯಾಗೇರಿ ಎಂಬುವವರೇ ಬಂಧಿತ ಅಧಿಕಾರಿ.
ಸ್ಥಳೀಯ ನಿವಾಸಿ ಗುರ್ಜರ್ ಎಂಬುವವರು ತಮ್ಮ ಜಮೀನಿನ ದಾಖಲೆಗಳಲ್ಲಿ ಬದಲಾವಣೆ ಮಾಡಿಕೊಡುವಂತೆ ಗ್ರಾಮ ಆಡಳಿತಾಧಿಕಾರಿ ಸಂತೋಷ್ ಅವರನ್ನು ಕೋರಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಅಧಿಕಾರಿ 18 ಸಾವಿರ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.
ಅಧಿಕಾರಿಯ ಭ್ರಷ್ಟತನದಿಂದ ಬೇಸತ್ತ ಸಂತ್ರಸ್ತರು ಕೂಡಲೇ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ಲಾನ್ ರೂಪಿಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ 13 ಸಾವಿರ ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲೇ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಸಿಪಿಐ ವಿನಾಯಕ್ ಬಿಲ್ಲವ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ದಾಳಿ ನಡೆದಿದ್ದು, ತಂಡದ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬಂಧಿತ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ತನಿಖೆ ಮುಂದುವರಿದಿದೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಎಸಗುವವರಿಗೆ ಈ ಘಟನೆ ಒಂದು ಎಚ್ಚರಿಕೆಯ ಸಂದೇಶ ನೀಡಿದಂತಾಗಿದ್ದು, ಜಿಲ್ಲೆಯಾದ್ಯಂತ ಈ ಕುರಿತು ವ್ಯಾಪಕ ಚರ್ಚೆ ವ್ಯಕ್ತವಾಗುತ್ತಿದೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…