ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…