ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…