ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…