ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…