ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.
ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು
ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…