ಭೂ ಕಬಳಿಕೆದಾರರಿಂದ ಸರ್ಕಾರಿ ಗೋಮಾಳವನ್ನು ರಕ್ಷಿಸಿ- ದಲಿತ ಸಂಘರ್ಷ ಸಮಿತಿ (ಭೀಮಬಣ)‌ ರಾ.ಪ್ರ.ಕಾರ್ಯದರ್ಶಿ ಯು.ಮುನಿರಾಜು

ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ‌ ಬಣದ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.

ಈ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ‌ ಭೂಗಳ್ಳರಿಂದ ಸರ್ಕಾರಿ ಗೋಮಾಳವನ್ನ ರಕ್ಷಣೆ ಮಾಡುವಂತೆ ಆಗ್ರಹಿಸಿ ಮಾತನಾಡಿದ ಅವರು, ಕೂಡಲೇ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಸುಳ್ಳು ದಾಖಲೆ ಸೃಷ್ಠಿಸಿ ಗೋಮಾಳ ಕಬಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ‌ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.

ಆದ್ದರಿಂದ ನೂತನ ತಹಶೀಲ್ದಾರ್ ಅವರು ಮತ್ತೊಮ್ಮೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ, ದಾಖಲಾತಿಗಳನ್ನ ಪರೀಕ್ಷಿಸಿ ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಂಡು ಸರ್ಕಾರಿ ಜಮೀನನ್ನು ಭೂ ರಹಿತರಿಗೆ ನೀಡಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರ ಮನವಿ ಸ್ವೀಕರಿ‌ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು

ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago