ಭೂ ಕಬಳಿಕೆದಾರರಿಂದ ಸರ್ಕಾರಿ ಗೋಮಾಳವನ್ನು ರಕ್ಷಿಸಿ- ದಲಿತ ಸಂಘರ್ಷ ಸಮಿತಿ (ಭೀಮಬಣ)‌ ರಾ.ಪ್ರ.ಕಾರ್ಯದರ್ಶಿ ಯು.ಮುನಿರಾಜು

ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ 22ಗುಂಟೆ ಜಮೀನಿನಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವವರಿಗೆ ತಹಶೀಲ್ದಾರ್ ಆದೇಶದಂತೆ 2ಎಕರೆಯನ್ನ ದರಖಾಸ್ತು ಮೂಲಕ ಮಂಜೂರು ಮಾಡಲಾಗಿದೆ. ಉಳಿಕೆ 16ಎಕರೆ 22ಗುಂಟೆ ಸರ್ಕಾರಿ ಗೋಮಾಳವು ಭೂಗಳ್ಳರ ಪಾಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಭೀಮ‌ ಬಣದ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಯು.ಮುನಿರಾಜು ಆರೋಪಿಸಿದರು.

ಈ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ‌ ಭೂಗಳ್ಳರಿಂದ ಸರ್ಕಾರಿ ಗೋಮಾಳವನ್ನ ರಕ್ಷಣೆ ಮಾಡುವಂತೆ ಆಗ್ರಹಿಸಿ ಮಾತನಾಡಿದ ಅವರು, ಕೂಡಲೇ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಸುಳ್ಳು ದಾಖಲೆ ಸೃಷ್ಠಿಸಿ ಗೋಮಾಳ ಕಬಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಮೂರು ಬಾರಿ ಈ ಕುರಿತು ಬೃಹತ್ ಪ್ರತಿಭಟನೆ ಮಾಡುವ ಮೂಲಕ‌ ಈ ಹಿಂದೆ ಇದ್ದ ತಹಶೀಲ್ದರ್ ಅವರ ಗಮನಕ್ಕೆ ತರಲಾಗಿತ್ತು, ನಮ್ಮ ಮನವಿ ಮೇರೆಗೆ ತಹಶೀಲ್ದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ದಾಖಲಾತಿಗಳನ್ನ ಕೂಲಕಂಷವಾಗಿ ಪರೀಕ್ಷೀಸಿ ಇದು ಸರ್ಕಾರಿ ಗೋಮಾಳ ಎಂದು ಮಾಹಿತಿ ನೀಡಿದ್ದರು. ಎಂ.ಆರ್ ವಜಾಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಆದರೆ ಇದೂವರೆಗೂ ಭೂಗಳ್ಳರಿಂದ ಗೋಮಾಳವನ್ನ ಮುಟ್ಟುಗೋಲು ಹಾಕಿಕೊಳ್ಳಲಿಲ್ಲ ಎಂದು ದೂರಿದರು.

ಆದ್ದರಿಂದ ನೂತನ ತಹಶೀಲ್ದಾರ್ ಅವರು ಮತ್ತೊಮ್ಮೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ, ದಾಖಲಾತಿಗಳನ್ನ ಪರೀಕ್ಷಿಸಿ ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಂಡು ಸರ್ಕಾರಿ ಜಮೀನನ್ನು ಭೂ ರಹಿತರಿಗೆ ನೀಡಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರ ಮನವಿ ಸ್ವೀಕರಿ‌ ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿಯನ್ನ ಸಿದ್ಧಪಡಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ್ ಅವರು ತಿಳಿಸಿದರು

ಈ ವೇಳೆ ರಾಜ್ಯಾಧ್ಯಕ್ಷ ಎಂ.ವಿ.ಗುರುಪ್ರಕಾಶ್ ಸೇರಿದಂತೆ ಸಂಘಟನೆಯ ಸದಸ್ಯರು, ಮುಖಂಡರು ಸೇರದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

2 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

4 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

6 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

8 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

9 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

10 hours ago