ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ ಭೂ ಮಾಪನ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು ಮಾತನಾಡಿದರು. ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಾವಿರಾರು ಅರ್ಜಿಗಳು ಬಾಕಿ:

ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ಅರ್ಜಿ ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆಯ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಬೇಸಿಗೆ ಆಗಿರುವುದರಿಂದ ರೈತರು ಬೆಳೆಗಳನ್ನ ಕಟಾವು ಮಾಡಿರುತ್ತಾರೆ. ಇದೀಗ ಜಮೀನುಗಳ ವ್ಯಾಪಾರ, ಕುಟುಂಬದಲ್ಲಿ ಆಸ್ತಿಗಳ ವಿಂಗಡಣೆ ಸೇರಿಸಂತೆ ಹಲವು ಕೆಲಸಗಳು ನಡೆಯುವ ಸಮಯವಾಗಿದೆ. ತಾಲ್ಲೂಕಿನಲ್ಲಿ ಸರ್ವೇ ಬಾಕಿ ಇರುವ ಅರ್ಜಿಗಳು 590, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ 1863 ಅರ್ಜಿಗಳು ವಿಲೇವಾರಿಯಾಗದೆ ನಿಂತಿವೆ. ಪರವಾನಗಿ ಪಡೆದ ಭೂ ಮಾಪಕರ ಪ್ರತಿಭಟನೆಯಿಂದಾಗಿ ಸಾಕಷ್ಟು ಅನಾನುಕೂಲಗಳಾಗಿವೆ. ನಮ್ಮ ಇಲಾಖೆಯ ಆಯುಕ್ತರಿಂದ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೆಶಕ ಮೋಹನ್ ಕುಮಾರ್ ಹೇಳಿದರು.

ಈ ವೇಳೆ ಕೆಸ್ತೂರು ರಮೇಶ್ ಗೌಡ, ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago