ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ ಭೂ ಮಾಪನ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು ಮಾತನಾಡಿದರು. ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಾವಿರಾರು ಅರ್ಜಿಗಳು ಬಾಕಿ:

ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ಅರ್ಜಿ ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆಯ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಬೇಸಿಗೆ ಆಗಿರುವುದರಿಂದ ರೈತರು ಬೆಳೆಗಳನ್ನ ಕಟಾವು ಮಾಡಿರುತ್ತಾರೆ. ಇದೀಗ ಜಮೀನುಗಳ ವ್ಯಾಪಾರ, ಕುಟುಂಬದಲ್ಲಿ ಆಸ್ತಿಗಳ ವಿಂಗಡಣೆ ಸೇರಿಸಂತೆ ಹಲವು ಕೆಲಸಗಳು ನಡೆಯುವ ಸಮಯವಾಗಿದೆ. ತಾಲ್ಲೂಕಿನಲ್ಲಿ ಸರ್ವೇ ಬಾಕಿ ಇರುವ ಅರ್ಜಿಗಳು 590, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ 1863 ಅರ್ಜಿಗಳು ವಿಲೇವಾರಿಯಾಗದೆ ನಿಂತಿವೆ. ಪರವಾನಗಿ ಪಡೆದ ಭೂ ಮಾಪಕರ ಪ್ರತಿಭಟನೆಯಿಂದಾಗಿ ಸಾಕಷ್ಟು ಅನಾನುಕೂಲಗಳಾಗಿವೆ. ನಮ್ಮ ಇಲಾಖೆಯ ಆಯುಕ್ತರಿಂದ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೆಶಕ ಮೋಹನ್ ಕುಮಾರ್ ಹೇಳಿದರು.

ಈ ವೇಳೆ ಕೆಸ್ತೂರು ರಮೇಶ್ ಗೌಡ, ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

6 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

8 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

13 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago