ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ ಭೂ ಮಾಪನ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು ಮಾತನಾಡಿದರು. ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಾವಿರಾರು ಅರ್ಜಿಗಳು ಬಾಕಿ:

ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ಅರ್ಜಿ ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆಯ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಬೇಸಿಗೆ ಆಗಿರುವುದರಿಂದ ರೈತರು ಬೆಳೆಗಳನ್ನ ಕಟಾವು ಮಾಡಿರುತ್ತಾರೆ. ಇದೀಗ ಜಮೀನುಗಳ ವ್ಯಾಪಾರ, ಕುಟುಂಬದಲ್ಲಿ ಆಸ್ತಿಗಳ ವಿಂಗಡಣೆ ಸೇರಿಸಂತೆ ಹಲವು ಕೆಲಸಗಳು ನಡೆಯುವ ಸಮಯವಾಗಿದೆ. ತಾಲ್ಲೂಕಿನಲ್ಲಿ ಸರ್ವೇ ಬಾಕಿ ಇರುವ ಅರ್ಜಿಗಳು 590, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ 1863 ಅರ್ಜಿಗಳು ವಿಲೇವಾರಿಯಾಗದೆ ನಿಂತಿವೆ. ಪರವಾನಗಿ ಪಡೆದ ಭೂ ಮಾಪಕರ ಪ್ರತಿಭಟನೆಯಿಂದಾಗಿ ಸಾಕಷ್ಟು ಅನಾನುಕೂಲಗಳಾಗಿವೆ. ನಮ್ಮ ಇಲಾಖೆಯ ಆಯುಕ್ತರಿಂದ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೆಶಕ ಮೋಹನ್ ಕುಮಾರ್ ಹೇಳಿದರು.

ಈ ವೇಳೆ ಕೆಸ್ತೂರು ರಮೇಶ್ ಗೌಡ, ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago