ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ ಭೂ ಮಾಪನ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು ಮಾತನಾಡಿದರು. ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಾವಿರಾರು ಅರ್ಜಿಗಳು ಬಾಕಿ:

ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ಅರ್ಜಿ ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆಯ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಬೇಸಿಗೆ ಆಗಿರುವುದರಿಂದ ರೈತರು ಬೆಳೆಗಳನ್ನ ಕಟಾವು ಮಾಡಿರುತ್ತಾರೆ. ಇದೀಗ ಜಮೀನುಗಳ ವ್ಯಾಪಾರ, ಕುಟುಂಬದಲ್ಲಿ ಆಸ್ತಿಗಳ ವಿಂಗಡಣೆ ಸೇರಿಸಂತೆ ಹಲವು ಕೆಲಸಗಳು ನಡೆಯುವ ಸಮಯವಾಗಿದೆ. ತಾಲ್ಲೂಕಿನಲ್ಲಿ ಸರ್ವೇ ಬಾಕಿ ಇರುವ ಅರ್ಜಿಗಳು 590, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ 1863 ಅರ್ಜಿಗಳು ವಿಲೇವಾರಿಯಾಗದೆ ನಿಂತಿವೆ. ಪರವಾನಗಿ ಪಡೆದ ಭೂ ಮಾಪಕರ ಪ್ರತಿಭಟನೆಯಿಂದಾಗಿ ಸಾಕಷ್ಟು ಅನಾನುಕೂಲಗಳಾಗಿವೆ. ನಮ್ಮ ಇಲಾಖೆಯ ಆಯುಕ್ತರಿಂದ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೆಶಕ ಮೋಹನ್ ಕುಮಾರ್ ಹೇಳಿದರು.

ಈ ವೇಳೆ ಕೆಸ್ತೂರು ರಮೇಶ್ ಗೌಡ, ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

37 minutes ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

47 minutes ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

12 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

12 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

14 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

17 hours ago