ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ ಭೂ ಮಾಪನ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು ಮಾತನಾಡಿದರು. ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಾವಿರಾರು ಅರ್ಜಿಗಳು ಬಾಕಿ:

ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ಅರ್ಜಿ ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆಯ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಬೇಸಿಗೆ ಆಗಿರುವುದರಿಂದ ರೈತರು ಬೆಳೆಗಳನ್ನ ಕಟಾವು ಮಾಡಿರುತ್ತಾರೆ. ಇದೀಗ ಜಮೀನುಗಳ ವ್ಯಾಪಾರ, ಕುಟುಂಬದಲ್ಲಿ ಆಸ್ತಿಗಳ ವಿಂಗಡಣೆ ಸೇರಿಸಂತೆ ಹಲವು ಕೆಲಸಗಳು ನಡೆಯುವ ಸಮಯವಾಗಿದೆ. ತಾಲ್ಲೂಕಿನಲ್ಲಿ ಸರ್ವೇ ಬಾಕಿ ಇರುವ ಅರ್ಜಿಗಳು 590, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ 1863 ಅರ್ಜಿಗಳು ವಿಲೇವಾರಿಯಾಗದೆ ನಿಂತಿವೆ. ಪರವಾನಗಿ ಪಡೆದ ಭೂ ಮಾಪಕರ ಪ್ರತಿಭಟನೆಯಿಂದಾಗಿ ಸಾಕಷ್ಟು ಅನಾನುಕೂಲಗಳಾಗಿವೆ. ನಮ್ಮ ಇಲಾಖೆಯ ಆಯುಕ್ತರಿಂದ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೆಶಕ ಮೋಹನ್ ಕುಮಾರ್ ಹೇಳಿದರು.

ಈ ವೇಳೆ ಕೆಸ್ತೂರು ರಮೇಶ್ ಗೌಡ, ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

9 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

10 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

10 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

15 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

21 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

21 hours ago