ಭೂ ಸರ್ವೇಗೆ ಡಿಜಿಟಲ್ ಸ್ಪರ್ಶ: ಇನ್ಮುಂದೆ 8 ನಿಮಿಷದಲ್ಲಿ ಮುಗಿಯಲಿದೆ ಜಮೀನು ಸರ್ವೇ ವರ್ಕ್: ವೇಗ, ನಿಖರತೆ, ದಕ್ಷತೆ ಭೂ ಸರ್ವೇಗೆ ರೋವರ್ ತಂತ್ರಜ್ಞಾನ ಬಳಕೆ

ಜಮೀನು ಸರ್ವೇ ವಿಚಾರದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ತಡೆಗೆ ಇನ್ಮುಂದೆ ರೋವರ್‌ ತಂತ್ರಜ್ಞಾನವನ್ನು ಸರ್ಕಾರ ಬಳಸಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಇದರಿಂದ ಭೂಮಿ ಸರ್ವೇ ಕಾರ್ಯ ಕೇವಲ ಎಂಟು ನಿಮಿಷಗಳಲ್ಲೇ ಮುಗಿಯಲಿದೆ. ಕಡಿಮೆ ಅವಧಿಯಲ್ಲಿ ಸರ್ವೇ ಕೆಲಸ ಮುಗಿಯುವುದರಿಂದ ಸರ್ವೇಯರ್‌ಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ಸ್ಯಾಟಲೈಟ್‌ನಿಂದ ಮಾಹಿತಿ ಪಡೆದು ಸ್ವಯಂಚಾಲಿತವಾಗಿ ನಕ್ಷೆ ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.

ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿ ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಹೆಚ್ಚಾಗಿ ಮನುಷ್ಯನ ಹಸ್ತಕ್ಷೇಪ ಇರುವುದರಿಂದ ಭ್ರಷ್ಟಾಚಾರಕ್ಕೆ ಅವಕಾಶವಿತ್ತು. ಒಂದು ನಕ್ಷೆ ತಯಾರಿಸಲು ಮೂವರು 50 ರಿಂದ 70 ನಿಮಿಷ ಭೂಮಿ ಸರ್ವೇ ನಡೆಸಿ ಬಳಿಕ ಕಚೇರಿಗೆ ಬಂದು ನಕ್ಷೆ ಬಿಡಿಸಲು 3 ತಾಸು ಬೇಕಾಗಿತ್ತು. ಆದರೆ, ಈಗ ರೋವ‌ರ್ ಬಳಕೆಯಿಂದ 8 ನಿಮಿಷದಲ್ಲಿ ಎಲ್ಲವೂ ಮುಗಿಯಲಿದೆ. ಸ್ಯಾಟಲೈಟ್‌ನಿಂದ ಮಾಹಿತಿ ಪಡೆದು ಸ್ವಯಂಚಾಲಿತವಾಗಿ ನಕ್ಷೆ ಸಿದ್ಧಪಡಿಸಲಿದೆ. ಅಧಿಕಾರಿಗಳಿಗೆ ಲಂಚ ನೀಡಿ ಬೇಕಾದ ರೀತಿ ನಕ್ಷೆ ಪಡೆಯುವ ಕ್ರಮಕ್ಕೆ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಕಡಿಮೆ ಅವಧಿಯಲ್ಲಿ ಸರ್ವೇ ಕೆಲಸ ಮುಗಿಯಲಿದ್ದು, ಸರ್ವೇಯರ್‌ಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಸರ್ಕಾರಿ ಮತ್ತು ಪರವಾನಗಿ ಹೊಂದಿರುವ ಸರ್ವೇಯರ್‌ಗಳಿಗೂ ವಿತರಿಸಲು 5 ಸಾವಿರ ರೋವರ್ ಖರೀದಿಗೆ ನಿರ್ಧರಿಸಲಾಗಿದೆ. ಮುಂದಿನ 8 ತಿಂಗಳ ಒಳಗಾಗಿ ಸರ್ವೇ ಕೆಲಸ ಸಂಪೂರ್ಣ ಡಿಜಿಟಲ್ ಆಗಬೇಕೆಂಬುದು ನಮ್ಮ ಆಶಯ ಎಂದರು.

ರೋವ‌ರ್ ತಂತ್ರಜ್ಞಾನ ವಿಶೇಷತೆ…

ಸರ್ವೇಯರ್‌ಗಳಿಗೆ 5 ಕೆಜಿ ತೂಕದ ಚೈನ್ ಹಿಡಿದು ಜಮೀನು ಅಳೆಯುವುದು ಸವಾಲಿನ ಕೆಲಸವಾಗಿತ್ತು. ಗುಡ್ಡಗಾಡು, ಕೆರೆ, ಅರಣ್ಯ ಪ್ರದೇಶಗಳಲ್ಲಿ ಸರ್ವೇ ಕ್ಲಿಷ್ಟರವಾಗಿತ್ತು. ಇದೀಗ ರೋವರ್ ಉಪಕರಣದಿಂದ ಸುಲಭವಾಗಿದೆ. ಇದು 800 ಗ್ರಾಂ ಇದ್ದು, ಆಧುನಿಕ ತಂತ್ರಜ್ಞಾನ ಉಪಕರಣವಾಗಿದೆ. ಸರ್ವೇ ಆಫ್ ಇಂಡಿಯಾ ರಾಜ್ಯದಲ್ಲಿ 49 ಕಂಟಿನ್ಯೂಸ್ಲಿ ಅಪರೇಟಿಂಗ್ ರೆಫರೆನ್ಸ್ ಸ್ಟೇಷನ್ (ಸಿಒಆರ್‌ಎಸ್) ಸ್ಥಾಪನೆ ಮಾಡಿದೆ. ಇದರೊಂದಿಗೆ ರೋವರ್ ಸಂಪರ್ಕ ಕಲ್ಪಿಸಿ ಜಮೀನು ಸರ್ವೇ ನಡೆಸಿದಾಗ ಸ್ವಯಂಚಾಲಿತವಾಗಿ ಗಡಿ ಗುರುತು ಮಾಡಿ ಟ್ಯಾಬ್‌ಗೆ ಸಂಪರ್ಕ ನೀಡಲಿದೆ. 2 ಸೆಂಟಿ ಮೀಟರ್ ಮಾತ್ರ ವ್ಯತ್ಯಾಸ ಬರಲಿದೆ. 6 ತಿಂಗಳಿಂದ ಪ್ರಾಯೋಗಿಕವಾಗಿ ಬಳಕೆ ಮಾಡಿದ್ದು, ಸರ್ವೇಯರ್ ಗಳಿಗೆ ತರಬೇತಿ ನೀಡಲಾಗಿದೆ. ರೋವರ್ ಒಂದಕ್ಕೆ 3.50 ಲಕ್ಷ ರೂ. ಆಗಲಿದೆ ಎಂದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತ ಜೆ. ಮಂಜುನಾಥ್ ಮಾಹಿತಿ ನೀಡಿದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

3 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

6 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

8 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

19 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

23 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago