ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ ಬೇಡಿಕೆ ಇಟ್ಟರೆ ಅದನ್ನು ಪ್ರಶ್ನಿಸಬೇಕು. ಕೂಡಲೇ ಶಾಸಕರ ಕಚೇರಿಗೆ ದೂರು ನೀಡಬೇಕು ಅಥವಾ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದ್ದಾರೆ.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಗೆ ನಾನು ಬದ್ಧರಾಗಿದ್ದೇನೆ. ತಾಲ್ಲೂಕಿನ ಜನತೆ ನೀಡಿರುವ ಅಧಿಕಾರವನ್ನು ಎಂದಿಗೂ ದುರುಪಯೋಗಪಡಿಸಿಕೊಂಡಿಲ್ಲ. ಮುಂದೆಯೂ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಜನಸೇವೆ ಮುಂದುವರಿಸುತ್ತೇನೆ ಎಂದು ಹೇಳಿದರು.

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ತಾಲ್ಲೂಕಿನಲ್ಲಿ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರಿಂದಲೂ ಹಣ ಪಡೆದಿಲ್ಲ, ಮುಂದೆಯೂ ಪಡೆಯುವುದಿಲ್ಲ. ಹಾಗಿರುವಾಗ ಅಧಿಕಾರಿಗಳು ಸಾರ್ವಜನಿಕರಿಂದ ಲಂಚ ಪಡೆಯಲು ಯಾವುದೇ ಕಾರಣವಿಲ್ಲ ಎಂದು ಅವರು ಹೇಳಿದರು.

ತಾಲ್ಲೂಕಿನ ಯಾವುದೇ ಸರ್ಕಾರಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ಮೌನವಾಗಿರದೆ ಕೂಡಲೇ ಶಾಸಕರ ಕಚೇರಿ ಸಿಬ್ಬಂದಿಗೆ ಮಾಹಿತಿ ನೀಡಬೇಕು ಅಥವಾ ನೇರವಾಗಿ ನನ್ನನ್ನು ಸಂಪರ್ಕಿಸಬೇಕು. ಜನರು ನೀಡಿರುವ ಅಧಿಕಾರವನ್ನು ಬಳಸಿಕೊಂಡು ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

19 minutes ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

4 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago