ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎಪಿಎಂಸಿ (ಕೃಷಿ ಇಲಾಖೆ) ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್., ಕೆಆರ್ಐಡಿಎಲ್ನ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರವೀಣ್ ಶ್ರೀಹರಿ ಹಾಗೂ ಸಾರ್ವಜನಿಕ ಕಾಮಗಾರಿ ಇಲಾಖೆ (PWD) ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಅವರಿಗೆ ಸಂಬಂಧಿಸಿದ ಒಟ್ಟು 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸಿದೆ.
20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಮನೆಗಳು, ಕಚೇರಿಗಳು ಮತ್ತು ಇತರೆ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಮೌಲ್ಯಯುತ ವಸ್ತುಗಳ ಪರಿಶೀಲನೆ ನಡೆಸಿದರು.
ಎಪಿಎಂಸಿ ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್. ಅವರ ನಿವಾಸದಲ್ಲಿ ಚಿನ್ನಾಭರಣ ಸೇರಿದಂತೆ ದುಬಾರಿ ವಸ್ತುಗಳು ಪತ್ತೆಯಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿ-ಪಾಸ್ತಿಗಳ ಮೌಲ್ಯಮಾಪನ ಕಾರ್ಯ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧದ ಪ್ರಕರಣಗಳಲ್ಲಿ ಲೋಕಾಯುಕ್ತ ಇಲಾಖೆ ತನಿಖೆಯನ್ನು ಮುಂದುವರಿಸಿದ್ದು, ದಾಳಿಯಲ್ಲಿ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…