ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ


ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಎಪಿಎಂಸಿ (ಕೃಷಿ ಇಲಾಖೆ) ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್., ಕೆಆರ್‌ಐಡಿಎಲ್‌ನ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರವೀಣ್ ಶ್ರೀಹರಿ ಹಾಗೂ ಸಾರ್ವಜನಿಕ ಕಾಮಗಾರಿ ಇಲಾಖೆ (PWD) ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಅವರಿಗೆ ಸಂಬಂಧಿಸಿದ ಒಟ್ಟು 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸಿದೆ.

20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಮನೆಗಳು, ಕಚೇರಿಗಳು ಮತ್ತು ಇತರೆ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಮೌಲ್ಯಯುತ ವಸ್ತುಗಳ ಪರಿಶೀಲನೆ ನಡೆಸಿದರು.

ಎಪಿಎಂಸಿ ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್. ಅವರ ನಿವಾಸದಲ್ಲಿ ಚಿನ್ನಾಭರಣ ಸೇರಿದಂತೆ ದುಬಾರಿ ವಸ್ತುಗಳು ಪತ್ತೆಯಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿ-ಪಾಸ್ತಿಗಳ ಮೌಲ್ಯಮಾಪನ ಕಾರ್ಯ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧದ ಪ್ರಕರಣಗಳಲ್ಲಿ ಲೋಕಾಯುಕ್ತ ಇಲಾಖೆ ತನಿಖೆಯನ್ನು ಮುಂದುವರಿಸಿದ್ದು, ದಾಳಿಯಲ್ಲಿ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

6 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

18 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

19 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

19 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

19 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

19 hours ago