Categories: ಕೋಲಾರ

ಭ್ರಷ್ಟಾಚಾರ ನಡೆದಿದ್ದರೆ ಅವತ್ತೇ ತನಿಖೆಗೆ ಒತ್ತಾಯಿಸಬೇಕಿತ್ತು- ವಡಗೂರು ಹರೀಶ್ ಗೆ ಈಗ ಜ್ಞಾನೋದಯವಾಯಿತೇ- ಸೀಸಂದ್ರ ಗೋಪಾಲಗೌಡ ಪ್ರಶ್ನೆ

ಕೋಲಾರ: ಕೋಚಿಮುಲ್ ನಲ್ಲಿ ಐದು ವರ್ಷ ನಿರ್ದೇಶಕನಾಗಿ ಅಧಿಕಾರ ಅನುಭವಿಸಿ ಈಗ ಭ್ರಷ್ಟಾಚಾರ ನಡೆದಿದೆ ಎನ್ನುವ ವಡಗೂರು ಹರೀಶ್ ಅವರಿಗೆ ನಾಚಿಕೆಯಾಗಬೇಕು. ಪ್ರತಿ ತಿಂಗಳ ಸಾಮಾನ್ಯ ಸಭೆಯಲ್ಲಿ ಜಮಾ ಖರ್ಚುಗಳ ಲೆಕ್ಕ ಕೊಟ್ಟಾಗ ಏಕೆ ಪ್ರಶ್ನೆ ಮಾಡಲಿಲ್ಲ? ಅವತ್ತು ಎಷ್ಟು ಸಭೆಗಳಿಗೆ ಡಿಸೆಂಟ್ ನೋಟ್ ಕೊಟ್ಟಿದ್ದೀರಿ ಈಗ ಜ್ಞಾನೋದಯವಾಗಿದೆಯೇ ಎಂದು ಕಾಂಗ್ರೆಸ್ ಮುಖಂಡ ಸೀಸಂಸ್ರ ಗೋಪಾಲಗೌಡ ಪ್ರಶ್ನಿಸಿದ್ದಾರೆ.

ಕೋಚಿಮುಲ್ ಅಕ್ರಮಗಳ ತನಿಖೆಗೆ ಆಗ್ರಹಿಸಿರುವ ವಡಗೂರು ಹರೀಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರವನ್ನು ಅನುಭವಿಸಿದ್ದಾಗ ಇಲ್ಲದ ಕಾಳಜಿ ಅಧಿಕಾರ ಹೋದ ಮೇಲೆ ಬಂದಂತಿದೆ. ಭ್ರಷ್ಟಾಚಾರ ನಡೆದಿದ್ದರೆ ಅವತ್ತೇ ತನಿಖೆಗೆ ಒತ್ತಾಯಿಸಬೇಕಿತ್ತು. ಕೋಚಿಮುಲ್ ನಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ, ಅಭಿವೃದ್ಧಿ ವಿಚಾರಗಳಿಗೆ ವಡಗೂರು ಹರೀಶ್ ಇದ್ದ ಆಡಳಿತ ಮಂಡಳಿಯೇ ಅನುಮೋದನೆ ನೀಡಿದೆ. ತಾವೂ ಅದರಲ್ಲಿ ಭಾಗಿದಾರರು ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಹೊಳಲಿ ಹತ್ತಿರದ ರೈತರ ಜಮೀನುಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ತಾವೇ ನೇತೃತ್ವ ವಹಿಸಿದ್ದೀರಿ. ಅವತ್ತು ಅಲ್ಲಿ ನೆಡದ ಒತ್ತುವರಿ ತೆರವಿನ ಬಳಿಕ ಆ ಜಾಗದಲ್ಲಿ ಬೋರ್ ವೆಲ್ ಹಾಕಿಸಿದ ಗುತ್ತಿಗೆದಾರ ಯಾರು ಸ್ವಾಮಿ? ಅವತ್ತು ರೈತರ ಬೆಳೆಗಳನ್ನು ನೋಡದೇ ರೈತರನ್ನು ಒಕ್ಕಲೆಬ್ಬಿಸಿದ್ದು ಮರೆತು ಹೋಯಿತೇ? ಒಕ್ಕೂಟದಲ್ಲಿ ಸಣ್ಣಪುಟ್ಟ ಕಾಮಗಾರಿಗಳ ಟೆಂಡರ್ ನಲ್ಲಿ ತಾವು ಮತ್ತು ತಮ್ಮ ಪಟಾಲಮ್ ಪಾತ್ರವಿದೆ ಎಂಬುದನ್ನು ಮರೆತು ಈಗ ಸತ್ಯ ಹರಿಶ್ಚಂದ್ರನ ರೀತಿಯಲ್ಲಿ ಕಾಂಗ್ರೆಸ್ ಶಾಸಕರ ಬಗ್ಗೆ ಮಾತಾಡತ್ತೀಯಾ? ಕೋಲಾರ ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲೇ ಬೇಕು ಎಂದು‌ ಹೊರಟವರು ನೀವು, ಇಷ್ಟಕ್ಕೂ ಕಾಂಗ್ರೆಸ್ ಶಾಸಕರ ಉಸಾಬುರಿ ತಮಗೆ ಏಕೆ ಸ್ವಾಮಿ? ಎಂದು ವಾಗ್ದಾಳಿ ನಡೆಸಿದರು.

ಡಿಸಿಸಿ ಬ್ಯಾಂಕ್ ನಲ್ಲಿ ಬಳಕೆದಾರರ ಸಂಘದಿಂದ ಬಂದಿರುವ ಮೂರ್ಖನ ಬಗ್ಗೆ ಹೇಳಿದ್ದೀಯಾ.
ಏಕೆ ನೇರವಾಗಿ ಅವರ ಹೆಸರು ಹೇಳಿಲ್ಲ? ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದ ತನ್ನನ್ನು ರಾಜಕೀಯಕ್ಕೆ ಕರೆದುಕೊಂಡು ಬಂದು ಜಿಲ್ಲಾ ಪಂಚಾಯತಿ ಸದಸ್ಯ, ಉಪಾಧ್ಯಕ್ಷ, ರಾಜ್ಯ ಯೋಜನಾ ಮಂಡಳಿ ನಿರ್ದೇಶಕನಾಗಿ ಮಾಡಿದ್ದು ಅಲ್ಲದೇ ಕೋಚಿಮುಲ್ ನಿರ್ದೇಶಕನಾಗಿ ಮಾಡಿದ್ದು ಕೂಡ ಇದೇ ಮೂರ್ಖರು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.

ಕೋಚಿಮುಲ್ ವಿಭಜನೆ ಇಲ್ಲದಾಗಲೇ ಕೋಲಾರ ತಾಲ್ಲೂಕನ್ನು ತಲಾ120 ಸಂಘಗಳು ಅಂತೆ ಉತ್ತರ ಮತ್ತು ದಕ್ಷಿಣ ಎಂದು ಎರಡು ಕ್ಷೇತ್ರ ಮಾಡಲಾಗಿತ್ತು ಕೋಮುಲ್ ಬೇರ್ಪಡಿಸಿದ ನಂತರ ಆಡಳಿತ ಮಂಡಳಿಯ ಒಟ್ಟು ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಕೋಲಾರ ಜಿಲ್ಲೆಯಲ್ಲಿ ಹೆಚ್ಚು ನಿರ್ದೇಶಕರು ಆಯ್ಕೆಯ ಮಾನದಂಡಗಳನ್ನು ಆಧರಿಸಿ ತಾಲೂಕಿನ ಒಟ್ಟು 240 ಸಂಘಗಳಿಂದ ತಲಾ 80 ಸಂಘಗಳನ್ನು ಸೇರಿಸಿ ಮೂರು ಕ್ಷೇತ್ರಗಳನ್ನು ಮಾಡಲಾಗಿದೆ ಅಷ್ಟ ಆದರೂ ಜ್ಞಾನವಿರಲಿ, ಕೋಲಾರ ತಾಲೂಕಿನಲ್ಲಿ ಮೂವರು ರೈತರ ಮಕ್ಕಳು ನಿರ್ದೇಶಕರು ಆಗುವುದು ತಮಗೆಲ್ಲಾ ಹೊಟ್ಟೆಹುರಿ ತರಿಸಿದೆ. ಇನ್ನು ತಾನು ಸಹಕಾರಿ ಕ್ಷೇತ್ರದಲ್ಲಿ ಅಂಬೆಗಾಲು ಇಡುತ್ತಿದ್ದೀಯಾ ಎನ್ನುವುದು ಮರೆಯಬೇಡ. ಮಾತಾಡುವ ಮೊದಲು ತಾನು ನಡೆದುಬಂದ ದಾರಿ ಮರೆಯಬಾರದು. ತಾನೊಬ್ಬನೇ ಬುದ್ಧಿವಂತ ಎಂದು ತನಗೆ ತಾನೇ ತಿಳಿದುಕೊಳ್ಳಬೇಡ. ಒಬ್ಬರಿಗಿಂತ ಒಬ್ಬ ಬುದ್ಧಿವಂತರು, ಸಹಕಾರಿಗಳು ಜಿಲ್ಲೆಯಲ್ಲಿ ಇದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

19 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago