Categories: ಕೋಲಾರ

ಭ್ರಷ್ಟಾಚಾರ ನಡೆದಿದ್ದರೆ ಅವತ್ತೇ ತನಿಖೆಗೆ ಒತ್ತಾಯಿಸಬೇಕಿತ್ತು- ವಡಗೂರು ಹರೀಶ್ ಗೆ ಈಗ ಜ್ಞಾನೋದಯವಾಯಿತೇ- ಸೀಸಂದ್ರ ಗೋಪಾಲಗೌಡ ಪ್ರಶ್ನೆ

ಕೋಲಾರ: ಕೋಚಿಮುಲ್ ನಲ್ಲಿ ಐದು ವರ್ಷ ನಿರ್ದೇಶಕನಾಗಿ ಅಧಿಕಾರ ಅನುಭವಿಸಿ ಈಗ ಭ್ರಷ್ಟಾಚಾರ ನಡೆದಿದೆ ಎನ್ನುವ ವಡಗೂರು ಹರೀಶ್ ಅವರಿಗೆ ನಾಚಿಕೆಯಾಗಬೇಕು. ಪ್ರತಿ ತಿಂಗಳ ಸಾಮಾನ್ಯ ಸಭೆಯಲ್ಲಿ ಜಮಾ ಖರ್ಚುಗಳ ಲೆಕ್ಕ ಕೊಟ್ಟಾಗ ಏಕೆ ಪ್ರಶ್ನೆ ಮಾಡಲಿಲ್ಲ? ಅವತ್ತು ಎಷ್ಟು ಸಭೆಗಳಿಗೆ ಡಿಸೆಂಟ್ ನೋಟ್ ಕೊಟ್ಟಿದ್ದೀರಿ ಈಗ ಜ್ಞಾನೋದಯವಾಗಿದೆಯೇ ಎಂದು ಕಾಂಗ್ರೆಸ್ ಮುಖಂಡ ಸೀಸಂಸ್ರ ಗೋಪಾಲಗೌಡ ಪ್ರಶ್ನಿಸಿದ್ದಾರೆ.

ಕೋಚಿಮುಲ್ ಅಕ್ರಮಗಳ ತನಿಖೆಗೆ ಆಗ್ರಹಿಸಿರುವ ವಡಗೂರು ಹರೀಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರವನ್ನು ಅನುಭವಿಸಿದ್ದಾಗ ಇಲ್ಲದ ಕಾಳಜಿ ಅಧಿಕಾರ ಹೋದ ಮೇಲೆ ಬಂದಂತಿದೆ. ಭ್ರಷ್ಟಾಚಾರ ನಡೆದಿದ್ದರೆ ಅವತ್ತೇ ತನಿಖೆಗೆ ಒತ್ತಾಯಿಸಬೇಕಿತ್ತು. ಕೋಚಿಮುಲ್ ನಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ, ಅಭಿವೃದ್ಧಿ ವಿಚಾರಗಳಿಗೆ ವಡಗೂರು ಹರೀಶ್ ಇದ್ದ ಆಡಳಿತ ಮಂಡಳಿಯೇ ಅನುಮೋದನೆ ನೀಡಿದೆ. ತಾವೂ ಅದರಲ್ಲಿ ಭಾಗಿದಾರರು ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಹೊಳಲಿ ಹತ್ತಿರದ ರೈತರ ಜಮೀನುಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ತಾವೇ ನೇತೃತ್ವ ವಹಿಸಿದ್ದೀರಿ. ಅವತ್ತು ಅಲ್ಲಿ ನೆಡದ ಒತ್ತುವರಿ ತೆರವಿನ ಬಳಿಕ ಆ ಜಾಗದಲ್ಲಿ ಬೋರ್ ವೆಲ್ ಹಾಕಿಸಿದ ಗುತ್ತಿಗೆದಾರ ಯಾರು ಸ್ವಾಮಿ? ಅವತ್ತು ರೈತರ ಬೆಳೆಗಳನ್ನು ನೋಡದೇ ರೈತರನ್ನು ಒಕ್ಕಲೆಬ್ಬಿಸಿದ್ದು ಮರೆತು ಹೋಯಿತೇ? ಒಕ್ಕೂಟದಲ್ಲಿ ಸಣ್ಣಪುಟ್ಟ ಕಾಮಗಾರಿಗಳ ಟೆಂಡರ್ ನಲ್ಲಿ ತಾವು ಮತ್ತು ತಮ್ಮ ಪಟಾಲಮ್ ಪಾತ್ರವಿದೆ ಎಂಬುದನ್ನು ಮರೆತು ಈಗ ಸತ್ಯ ಹರಿಶ್ಚಂದ್ರನ ರೀತಿಯಲ್ಲಿ ಕಾಂಗ್ರೆಸ್ ಶಾಸಕರ ಬಗ್ಗೆ ಮಾತಾಡತ್ತೀಯಾ? ಕೋಲಾರ ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲೇ ಬೇಕು ಎಂದು‌ ಹೊರಟವರು ನೀವು, ಇಷ್ಟಕ್ಕೂ ಕಾಂಗ್ರೆಸ್ ಶಾಸಕರ ಉಸಾಬುರಿ ತಮಗೆ ಏಕೆ ಸ್ವಾಮಿ? ಎಂದು ವಾಗ್ದಾಳಿ ನಡೆಸಿದರು.

ಡಿಸಿಸಿ ಬ್ಯಾಂಕ್ ನಲ್ಲಿ ಬಳಕೆದಾರರ ಸಂಘದಿಂದ ಬಂದಿರುವ ಮೂರ್ಖನ ಬಗ್ಗೆ ಹೇಳಿದ್ದೀಯಾ.
ಏಕೆ ನೇರವಾಗಿ ಅವರ ಹೆಸರು ಹೇಳಿಲ್ಲ? ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಇಲ್ಲದ ತನ್ನನ್ನು ರಾಜಕೀಯಕ್ಕೆ ಕರೆದುಕೊಂಡು ಬಂದು ಜಿಲ್ಲಾ ಪಂಚಾಯತಿ ಸದಸ್ಯ, ಉಪಾಧ್ಯಕ್ಷ, ರಾಜ್ಯ ಯೋಜನಾ ಮಂಡಳಿ ನಿರ್ದೇಶಕನಾಗಿ ಮಾಡಿದ್ದು ಅಲ್ಲದೇ ಕೋಚಿಮುಲ್ ನಿರ್ದೇಶಕನಾಗಿ ಮಾಡಿದ್ದು ಕೂಡ ಇದೇ ಮೂರ್ಖರು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.

ಕೋಚಿಮುಲ್ ವಿಭಜನೆ ಇಲ್ಲದಾಗಲೇ ಕೋಲಾರ ತಾಲ್ಲೂಕನ್ನು ತಲಾ120 ಸಂಘಗಳು ಅಂತೆ ಉತ್ತರ ಮತ್ತು ದಕ್ಷಿಣ ಎಂದು ಎರಡು ಕ್ಷೇತ್ರ ಮಾಡಲಾಗಿತ್ತು ಕೋಮುಲ್ ಬೇರ್ಪಡಿಸಿದ ನಂತರ ಆಡಳಿತ ಮಂಡಳಿಯ ಒಟ್ಟು ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಕೋಲಾರ ಜಿಲ್ಲೆಯಲ್ಲಿ ಹೆಚ್ಚು ನಿರ್ದೇಶಕರು ಆಯ್ಕೆಯ ಮಾನದಂಡಗಳನ್ನು ಆಧರಿಸಿ ತಾಲೂಕಿನ ಒಟ್ಟು 240 ಸಂಘಗಳಿಂದ ತಲಾ 80 ಸಂಘಗಳನ್ನು ಸೇರಿಸಿ ಮೂರು ಕ್ಷೇತ್ರಗಳನ್ನು ಮಾಡಲಾಗಿದೆ ಅಷ್ಟ ಆದರೂ ಜ್ಞಾನವಿರಲಿ, ಕೋಲಾರ ತಾಲೂಕಿನಲ್ಲಿ ಮೂವರು ರೈತರ ಮಕ್ಕಳು ನಿರ್ದೇಶಕರು ಆಗುವುದು ತಮಗೆಲ್ಲಾ ಹೊಟ್ಟೆಹುರಿ ತರಿಸಿದೆ. ಇನ್ನು ತಾನು ಸಹಕಾರಿ ಕ್ಷೇತ್ರದಲ್ಲಿ ಅಂಬೆಗಾಲು ಇಡುತ್ತಿದ್ದೀಯಾ ಎನ್ನುವುದು ಮರೆಯಬೇಡ. ಮಾತಾಡುವ ಮೊದಲು ತಾನು ನಡೆದುಬಂದ ದಾರಿ ಮರೆಯಬಾರದು. ತಾನೊಬ್ಬನೇ ಬುದ್ಧಿವಂತ ಎಂದು ತನಗೆ ತಾನೇ ತಿಳಿದುಕೊಳ್ಳಬೇಡ. ಒಬ್ಬರಿಗಿಂತ ಒಬ್ಬ ಬುದ್ಧಿವಂತರು, ಸಹಕಾರಿಗಳು ಜಿಲ್ಲೆಯಲ್ಲಿ ಇದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

2 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

2 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

4 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

4 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

7 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

15 hours ago