ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು- ನ್ಯಾ. ಸಂತೋಷ್ ಹೆಗ್ಡೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟರು.

ಅವರು ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ “ಮಾಹಿತಿ ಹಕ್ಕು ದಿನಾಚರಣೆ” ಹಾಗೂ ಸಂಘಟನೆಯ “5 ನೇ ವಾರ್ಷಿಕೋತ್ಸವ”ದ ಅಂಗವಾಗಿ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುತ್ತಿರುವ ಲಂಚ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆ ಯಲ್ಲಿ ಕಾನೂನಿನ ಅರಿವು ಇರಬೇಕು ಹಾಗೂ ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು‌ ಎಂದರು.

ನ್ಯಾಯ ಮಾರ್ಗದಿಂದ ಹಣ ಸಂಪಾದಿಸಬೇಕು ಅನ್ಯಾಯ ಮಾರ್ಗದಿಂದ ಸಂಪಾದಿಸಿದ ಹಣದಿಂದ ನೆಮ್ಮದಿ ದೊರಕುವುದಿಲ್ಲೆಂದರು. ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ಹೋರಾಡುತ್ತಿರುವ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಬೆಟ್ಟಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ, ಸಮಾಜದಲ್ಲಿನ ಭ್ರಷ್ಟಚಾರ ತಡೆಗಟ್ಟಲು ಗ್ರಾಮ ಪಂಚಾಯತಿ ಯಿಂದ ಪ್ರಾರಂಭವಾಗಿ ಪಾರ್ಲಿಮೆಂಟ್ ವರೆಗೆ ಭ್ರಷ್ಟಚಾರ ನಿರ್ಮೂಲನೆ ಅಭಿಯಾನ ಪ್ರಾರಂಭವಾಗಬೇಕು.ಹಾಗೂ ಸಾಮಾಜಿಕ ಹೋರಾಟಗಾರರು,ಮಾಹಿತಿ ಹಕ್ಕು ಕಾರ್ಯಕರ್ತರು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುವುದರ ಮುಖಾಂತರ ಭ್ರಷ್ಟಚಾರದ ವಿರುದ್ದ ದ್ವನಿ ಯಾಗಬೇಕು ಎಂದು ಕರೆ ಕೊಟ್ಟರು.

ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲದಂತಾಗಿದೆ ಕಾರಣ ಇತಿಹಾಸದಲ್ಲಿ ನಾವು,ನೀವು ಓದಿದಂತೆ ರಾಜನ ಮಗ ರಾಜನೇ ಆಗುತಿದ್ದರಲ್ಲಾ ಅದೇ ರೀತಿ ಈಗ ರಾಜಕಾರಣಿಗಳ ಮಕ್ಕಳು ರಾಜಕಾರಣಿ ಗಳೇ ಆಗುತ್ತಿದ್ದಾರೆ. ಅದು ನಿಲ್ಲಬೇಕು.ಸಮಾಜದ ಬಗ್ಗೆ ಕಾಳಜಿ ಇರುವ ವ್ಯಕ್ತಿಗಳುಮಾತ್ರವೇ ರಾಜಕಾರಣದಲ್ಲಿ ಉಳಿಯಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ಯುವಕರು ಮುಂದಾಗಬೇಕು ಅಲ್ಲದೇ ಮನೆಗೊಬ್ಬ ಮಾಹಿತಿ ಕಾರ್ಯಕರ್ತರ ಉದ್ಭವಿದಾಗ ಮಾತ್ರವೇ ಭ್ರಷ್ಟಾಚಾರವನ್ನು ತಡೆಗಟ್ಟಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ವತಿಯಿಂದ ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರ್,ಸಂಸ್ಥಾಪಕ ಹೆಚ್.ಜಿ. ರಮೇಶ್ ಕುಣಿಗಲ್, ರಾಜ್ಯಾಧ್ಯಕ್ಷರ ಚೆನ್ನಯ್ಯ ಎಂ.ವಸ್ತ್ರದ್, ಕಾರ್ಯಾಧ್ಯಕ್ಷ ಎಂ.ಓಂಕಾರಪ್ಪ, ರಾಜ್ಯ ಉಪಾಧ್ಯಕ್ಷ ನರಸಿಂಹ‌ಗೌಡ, ಪ್ರಾಧಾನ ಕಾರ್ಯದರ್ಶಿ ಹೆಚ್.ಡಿ.ರುದ್ರೇಶ್, ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್.ಡಿ. ಉಪ್ಪಾರ್ ಸಂಘಟನೆಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಟಿ. ಮೋಹನ್, ಶಂಕರ್ ಬೆನ್ನೂರು, ಶಿವಲಿಂಗಯ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರು/ಕಾರ್ಯದರ್ಶಿ ಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago