ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು- ನ್ಯಾ. ಸಂತೋಷ್ ಹೆಗ್ಡೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟರು.

ಅವರು ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ “ಮಾಹಿತಿ ಹಕ್ಕು ದಿನಾಚರಣೆ” ಹಾಗೂ ಸಂಘಟನೆಯ “5 ನೇ ವಾರ್ಷಿಕೋತ್ಸವ”ದ ಅಂಗವಾಗಿ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುತ್ತಿರುವ ಲಂಚ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆ ಯಲ್ಲಿ ಕಾನೂನಿನ ಅರಿವು ಇರಬೇಕು ಹಾಗೂ ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು‌ ಎಂದರು.

ನ್ಯಾಯ ಮಾರ್ಗದಿಂದ ಹಣ ಸಂಪಾದಿಸಬೇಕು ಅನ್ಯಾಯ ಮಾರ್ಗದಿಂದ ಸಂಪಾದಿಸಿದ ಹಣದಿಂದ ನೆಮ್ಮದಿ ದೊರಕುವುದಿಲ್ಲೆಂದರು. ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ಹೋರಾಡುತ್ತಿರುವ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಬೆಟ್ಟಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ, ಸಮಾಜದಲ್ಲಿನ ಭ್ರಷ್ಟಚಾರ ತಡೆಗಟ್ಟಲು ಗ್ರಾಮ ಪಂಚಾಯತಿ ಯಿಂದ ಪ್ರಾರಂಭವಾಗಿ ಪಾರ್ಲಿಮೆಂಟ್ ವರೆಗೆ ಭ್ರಷ್ಟಚಾರ ನಿರ್ಮೂಲನೆ ಅಭಿಯಾನ ಪ್ರಾರಂಭವಾಗಬೇಕು.ಹಾಗೂ ಸಾಮಾಜಿಕ ಹೋರಾಟಗಾರರು,ಮಾಹಿತಿ ಹಕ್ಕು ಕಾರ್ಯಕರ್ತರು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುವುದರ ಮುಖಾಂತರ ಭ್ರಷ್ಟಚಾರದ ವಿರುದ್ದ ದ್ವನಿ ಯಾಗಬೇಕು ಎಂದು ಕರೆ ಕೊಟ್ಟರು.

ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲದಂತಾಗಿದೆ ಕಾರಣ ಇತಿಹಾಸದಲ್ಲಿ ನಾವು,ನೀವು ಓದಿದಂತೆ ರಾಜನ ಮಗ ರಾಜನೇ ಆಗುತಿದ್ದರಲ್ಲಾ ಅದೇ ರೀತಿ ಈಗ ರಾಜಕಾರಣಿಗಳ ಮಕ್ಕಳು ರಾಜಕಾರಣಿ ಗಳೇ ಆಗುತ್ತಿದ್ದಾರೆ. ಅದು ನಿಲ್ಲಬೇಕು.ಸಮಾಜದ ಬಗ್ಗೆ ಕಾಳಜಿ ಇರುವ ವ್ಯಕ್ತಿಗಳುಮಾತ್ರವೇ ರಾಜಕಾರಣದಲ್ಲಿ ಉಳಿಯಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಮಾಜ ಕಟ್ಟುವಲ್ಲಿ ಯುವಕರು ಮುಂದಾಗಬೇಕು ಅಲ್ಲದೇ ಮನೆಗೊಬ್ಬ ಮಾಹಿತಿ ಕಾರ್ಯಕರ್ತರ ಉದ್ಭವಿದಾಗ ಮಾತ್ರವೇ ಭ್ರಷ್ಟಾಚಾರವನ್ನು ತಡೆಗಟ್ಟಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ವತಿಯಿಂದ ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ‘ವಿಚಾರಕ್ರಾಂತಿ ರತ್ನ ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರ್,ಸಂಸ್ಥಾಪಕ ಹೆಚ್.ಜಿ. ರಮೇಶ್ ಕುಣಿಗಲ್, ರಾಜ್ಯಾಧ್ಯಕ್ಷರ ಚೆನ್ನಯ್ಯ ಎಂ.ವಸ್ತ್ರದ್, ಕಾರ್ಯಾಧ್ಯಕ್ಷ ಎಂ.ಓಂಕಾರಪ್ಪ, ರಾಜ್ಯ ಉಪಾಧ್ಯಕ್ಷ ನರಸಿಂಹ‌ಗೌಡ, ಪ್ರಾಧಾನ ಕಾರ್ಯದರ್ಶಿ ಹೆಚ್.ಡಿ.ರುದ್ರೇಶ್, ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್.ಡಿ. ಉಪ್ಪಾರ್ ಸಂಘಟನೆಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಟಿ. ಮೋಹನ್, ಶಂಕರ್ ಬೆನ್ನೂರು, ಶಿವಲಿಂಗಯ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರು/ಕಾರ್ಯದರ್ಶಿ ಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

3 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

3 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

3 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

4 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

5 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

9 hours ago