ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ವ್ಯಕ್ತಿ ತಮ್ಮ ಮನೆಯಲ್ಲೇ ಬದಲಾವಣೆ ಆರಂಭಿಸಬೇಕು. ಮಕ್ಕಳಿಗೂ ಕೂಡ ಹಿರಿಯರು ಬಾಲ್ಯದಿಂದಲ್ಲೇ ಮೌಲ್ಯಗಳನ್ನು ಕಲಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಕಾರಿ ಜಗದೀಶ್ ತಿಳಿಸಿದರು.
ತಾಲೂಕಿನ ಕಂಟನಕುಂಟೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭರಿತ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿ ಮನೆಯಲ್ಲಿ ಪೋಷಕರು ಮೌಲ್ಯಗಳನ್ನು ಬಿತ್ತಿದರೆ, ಆ ಮೌಲ್ಯಗಳು ಸಮಾಜದಲ್ಲಿ ಬೃಹತ್ ಬದಲಾವಣೆ ತರುತ್ತವೆ. ನಾವು ಇಂದು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬದ್ಧರಾಗಿಲ್ಲದಿದ್ದರೆ, ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಪ್ರಯತ್ನಿಸಬೇಕು ಎಂದರು.
ಜಿಕೆವಿಕೆ ವಿಶ್ವವಿದ್ಯಾಲಯದ ಪ್ರೊ. ಡಾ. ಅನಿತಾ ನಾರಾಯಣಸ್ವಾಮಿ ಮಾತನಾಡಿ, ಮಕ್ಕಳಿಗೆ ಸತ್ಯ, ನಂಬಿಕೆ, ಹಾಗೂ ಪ್ರಾಮಾಣಿಕತೆಯ ಮೌಲ್ಯಗಳನ್ನು ಕಲಿಸುವುದು ಪೋಷಕರ ಮುಖ್ಯ ಕರ್ತವ್ಯ. ನಮ್ಮ ಮಕ್ಕಳ ಗುಣವನ್ನು ಬದಲಾಯಿಸಿದರೆ, ಸಮಾಜದ ಗುಣತತ್ತ್ವವೂ ಬದಲಾಯಿಸಬಹುದು ಎಂದರು. ಜಪಾನ್ ದೇಶದ ಕಡಿಮೆ ಕಳ್ಳತನದ ಉದಾಹರಣೆ ನೀಡುತ್ತಾ, ಮಾನವ ಗುಣಗಳ ಅಳವಡಿಕೆಗೆ ಸಂಬಂಧಿಸಿದ ಜಾಗೃತಿ ಮೂಡಿಸಿದರು.
ಕೊಂಗಡಿಯಪ್ಪ ಕಾಲೇಜಿನ ಪ್ರೊ. ಮಂಜುನಾಥ್ ಬಿ. ಎಸ್ ಮಾತನಾಡಿ, ಭ್ರಷ್ಟಾಚಾರ ಅನ್ನೋದು ಒಂದು ದೊಡ್ಡ ಪಿಡುಗಾಗಿದೆ ಇದು ನಿರ್ಮೂಲನೆ ಆಗಬೇಕಾದರೆ ಮಕ್ಕಳಿಗೆ ನಾವು ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸಬೇಕು ಮತ್ತು ಮೌಲ್ಯ ಆಧಾರಿತ ಶಿಕ್ಷಣವನ್ನು ನೀಡುವುದರ ಮೂಲಕ ಮುಂದಿನ ದಿನಗಳಲ್ಲಿ ಅವರು ಯಾವುದೇ ಅಕಾರಿಯಾದರೆ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳುತ್ತಾರೆ ಹಾಗೂ ತೃಪ್ತಿಯಿಂದ ಕಾರ್ಯನಿರ್ವಹಿಸುತ್ತಾರೆ ಭ್ರಷ್ಟಾಚಾರದಿಂದ ದೂರ ಉಳಿಯುತ್ತಾರೆ ಎಂದರು.
ಈ ವೇಳೆಯಲ್ಲಿ ಭರಿತ ಟ್ರಸ್ಟ್ ಅಧ್ಯಕ್ಷೆ ಭಾರತಿ, ಉಪನ್ಯಾಸಕ ಪ್ರೊ. ಪವನ್ ಕುಮಾರ್ , ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದರು.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…