ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ವ್ಯಕ್ತಿ ತಮ್ಮ ಮನೆಯಲ್ಲೇ ಬದಲಾವಣೆ ಆರಂಭಿಸಬೇಕು- ವಿಶೇಷಚೇನರ ಕಲ್ಯಾಣಾಕಾರಿ ಜಗದೀಶ್ ಅಭಿಮತ

ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ವ್ಯಕ್ತಿ ತಮ್ಮ ಮನೆಯಲ್ಲೇ ಬದಲಾವಣೆ ಆರಂಭಿಸಬೇಕು. ಮಕ್ಕಳಿಗೂ ಕೂಡ ಹಿರಿಯರು ಬಾಲ್ಯದಿಂದಲ್ಲೇ ಮೌಲ್ಯಗಳನ್ನು ಕಲಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಕಾರಿ ಜಗದೀಶ್ ತಿಳಿಸಿದರು.

ತಾಲೂಕಿನ ಕಂಟನಕುಂಟೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭರಿತ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ಮನೆಯಲ್ಲಿ ಪೋಷಕರು ಮೌಲ್ಯಗಳನ್ನು ಬಿತ್ತಿದರೆ, ಆ ಮೌಲ್ಯಗಳು ಸಮಾಜದಲ್ಲಿ ಬೃಹತ್ ಬದಲಾವಣೆ ತರುತ್ತವೆ. ನಾವು ಇಂದು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಬದ್ಧರಾಗಿಲ್ಲದಿದ್ದರೆ, ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಪ್ರಯತ್ನಿಸಬೇಕು ಎಂದರು.

ಜಿಕೆವಿಕೆ ವಿಶ್ವವಿದ್ಯಾಲಯದ ಪ್ರೊ. ಡಾ. ಅನಿತಾ ನಾರಾಯಣಸ್ವಾಮಿ ಮಾತನಾಡಿ, ಮಕ್ಕಳಿಗೆ ಸತ್ಯ, ನಂಬಿಕೆ, ಹಾಗೂ ಪ್ರಾಮಾಣಿಕತೆಯ ಮೌಲ್ಯಗಳನ್ನು ಕಲಿಸುವುದು ಪೋಷಕರ ಮುಖ್ಯ ಕರ್ತವ್ಯ. ನಮ್ಮ ಮಕ್ಕಳ ಗುಣವನ್ನು ಬದಲಾಯಿಸಿದರೆ, ಸಮಾಜದ ಗುಣತತ್ತ್ವವೂ ಬದಲಾಯಿಸಬಹುದು ಎಂದರು. ಜಪಾನ್ ದೇಶದ ಕಡಿಮೆ ಕಳ್ಳತನದ ಉದಾಹರಣೆ ನೀಡುತ್ತಾ, ಮಾನವ ಗುಣಗಳ ಅಳವಡಿಕೆಗೆ ಸಂಬಂಧಿಸಿದ ಜಾಗೃತಿ ಮೂಡಿಸಿದರು.

ಕೊಂಗಡಿಯಪ್ಪ ಕಾಲೇಜಿನ ಪ್ರೊ. ಮಂಜುನಾಥ್ ಬಿ. ಎಸ್ ಮಾತನಾಡಿ, ಭ್ರಷ್ಟಾಚಾರ ಅನ್ನೋದು ಒಂದು ದೊಡ್ಡ ಪಿಡುಗಾಗಿದೆ ಇದು ನಿರ್ಮೂಲನೆ ಆಗಬೇಕಾದರೆ ಮಕ್ಕಳಿಗೆ ನಾವು ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸಬೇಕು ಮತ್ತು ಮೌಲ್ಯ ಆಧಾರಿತ ಶಿಕ್ಷಣವನ್ನು ನೀಡುವುದರ ಮೂಲಕ ಮುಂದಿನ ದಿನಗಳಲ್ಲಿ ಅವರು ಯಾವುದೇ ಅಕಾರಿಯಾದರೆ ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳುತ್ತಾರೆ ಹಾಗೂ ತೃಪ್ತಿಯಿಂದ ಕಾರ್ಯನಿರ್ವಹಿಸುತ್ತಾರೆ ಭ್ರಷ್ಟಾಚಾರದಿಂದ ದೂರ ಉಳಿಯುತ್ತಾರೆ ಎಂದರು.

ಈ ವೇಳೆಯಲ್ಲಿ ಭರಿತ ಟ್ರಸ್ಟ್ ಅಧ್ಯಕ್ಷೆ ಭಾರತಿ, ಉಪನ್ಯಾಸಕ ಪ್ರೊ. ಪವನ್ ಕುಮಾರ್ , ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

17 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago