ಭ್ರಷ್ಟ ಆಡಳಿತ ವ್ಯವಸ್ಥೆ ಸರಿಪಡಿಸಲು ಕೆಚ್ಚೆದೆಯ ಹೋರಾಟ ಮಾಡಿದ ಕ್ರಾಂತಿಕಾರಿ ಕವಿ ಗದ್ದರ್: -ಕಜಾಪ ಅಧ್ಯಕ್ಷ ಕೆ.ವೆಂಕಟೇಶ್

ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ‌ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.

ಅನ್ಯಾಯ, ಮೋಸ, ಗೊಡ್ಡು ಸಂಪ್ರದಾಯಗಳಿಂದ ಕೂಡಿರುವ ಸಮಾಜ, ಜನರಿಗೆ ಉಪಯೋಗಕ್ಕೆ ಬಾರದ ವ್ಯವಸ್ಥೆಯನ್ನು ಬದಲಾಯಿಸಲು ಹೋರಾಟ, ಚಳವಳಿ ಅತ್ಯಗತ್ಯ, ಆದರೆ ಪ್ರಸ್ತುತ ದಿನಗಳಲ್ಲಿ ಜನರು ಚಳವಳಿ, ಹೋರಾಟಗಳಿಂದ ಹಿಂದೆ ಸರಿದಿರುವುದು ವಿಪರ್ಯಾಸ ಎಂದು ವಿಷಾದ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.

ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್ ಮಾತನಾಡಿ ಹಲವು ವರ್ಷಗಳ ಹಿಂದೆ ತಾಲ್ಲೂಕಿನ ಹಲವು ಪ್ರಗತಿ ಪರ ಸಂಘಟನೆಗಳು ಹೈದರಾಬಾದ್ ನಲ್ಲಿ ಗದ್ದರ್ ಅವರನ್ನು ಭೇಟಿಯಾಗಿದ್ದೇವು. ಅಂದಿನ ಜೀತ ಪದ್ದತಿ, ತುಳಿತಕ್ಕೊಳದ ಜನತೆ, ಸಣ್ಣ ಹಿಡುವಳಿದಾರರ ಪರವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದರು. ಗದ್ದರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಶ್ನಿಸುವ ಮನೋಭಾವ ತನ್ನಿಂತಾನೆ ನಮ್ಮಲ್ಲಿ ಬೆಳೆಯುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 hour ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

5 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

20 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

21 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago