ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.
ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.
ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…