ಭ್ರಷ್ಟ ಆಡಳಿತ ವ್ಯವಸ್ಥೆ ಸರಿಪಡಿಸಲು ಕೆಚ್ಚೆದೆಯ ಹೋರಾಟ ಮಾಡಿದ ಕ್ರಾಂತಿಕಾರಿ ಕವಿ ಗದ್ದರ್: -ಕಜಾಪ ಅಧ್ಯಕ್ಷ ಕೆ.ವೆಂಕಟೇಶ್

ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ‌ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.

ಅನ್ಯಾಯ, ಮೋಸ, ಗೊಡ್ಡು ಸಂಪ್ರದಾಯಗಳಿಂದ ಕೂಡಿರುವ ಸಮಾಜ, ಜನರಿಗೆ ಉಪಯೋಗಕ್ಕೆ ಬಾರದ ವ್ಯವಸ್ಥೆಯನ್ನು ಬದಲಾಯಿಸಲು ಹೋರಾಟ, ಚಳವಳಿ ಅತ್ಯಗತ್ಯ, ಆದರೆ ಪ್ರಸ್ತುತ ದಿನಗಳಲ್ಲಿ ಜನರು ಚಳವಳಿ, ಹೋರಾಟಗಳಿಂದ ಹಿಂದೆ ಸರಿದಿರುವುದು ವಿಪರ್ಯಾಸ ಎಂದು ವಿಷಾದ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.

ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್ ಮಾತನಾಡಿ ಹಲವು ವರ್ಷಗಳ ಹಿಂದೆ ತಾಲ್ಲೂಕಿನ ಹಲವು ಪ್ರಗತಿ ಪರ ಸಂಘಟನೆಗಳು ಹೈದರಾಬಾದ್ ನಲ್ಲಿ ಗದ್ದರ್ ಅವರನ್ನು ಭೇಟಿಯಾಗಿದ್ದೇವು. ಅಂದಿನ ಜೀತ ಪದ್ದತಿ, ತುಳಿತಕ್ಕೊಳದ ಜನತೆ, ಸಣ್ಣ ಹಿಡುವಳಿದಾರರ ಪರವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದರು. ಗದ್ದರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಶ್ನಿಸುವ ಮನೋಭಾವ ತನ್ನಿಂತಾನೆ ನಮ್ಮಲ್ಲಿ ಬೆಳೆಯುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

22 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago