ಭ್ರಷ್ಟ ಆಡಳಿತ ವ್ಯವಸ್ಥೆ ಸರಿಪಡಿಸಲು ಕೆಚ್ಚೆದೆಯ ಹೋರಾಟ ಮಾಡಿದ ಕ್ರಾಂತಿಕಾರಿ ಕವಿ ಗದ್ದರ್: -ಕಜಾಪ ಅಧ್ಯಕ್ಷ ಕೆ.ವೆಂಕಟೇಶ್

ಕೈ ತುಂಬಾ ಸಂಬಳ ಬರುವ ಸರ್ಕಾರಿ ಕೆಲಸವನ್ನು ತೊರೆದು ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಮತ್ತು ಜನಸಾಮಾನ್ಯರ ಪರವಾಗಿ ಕ್ರಾಂತಿಕಾರಿ ಹೋರಾಟಕ್ಕೆ ಧುಮುಕಿದ್ದವರು ಕವಿ ಗದ್ದರ್ ಎಂದು ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಕನ್ನಡ ಜಾಗೃತ ಪರಿಷತ್ ಮತ್ತು ಪ್ರಗತಿ ಪರ ಸಂಘಟನೆಗಳಿಂದ ಕನ್ನಡ ಜಾಗೃತ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಲಿತ ಹೋರಾಟಗಾರ ಗದ್ದರ್ ನುಡಿನಮನ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯಾಯ, ಮೋಸ, ವಂಚನೆ, ದೌರ್ಜನ್ಯ, ದಬ್ಬಾಳಿಕೆಯನ್ನು ಕೆಚ್ಚೆದೆಯದಿಂದ ವಿರೋಧಿಸುವ, ಹಿಮ್ಮೆಟ್ಟಿಸುವ ಶಕ್ತಿ ಗದ್ದರ್ ಅವರಲ್ಲಿತ್ತು. ಸದಾಕಾಲ ಶೋಷಣೆಗೆ ಒಳಗಾದ, ದಮನಕ್ಕೆ ಒಳಗಾದ, ದೀನ ದಲಿತ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟ ಮಹಾನ್ ಕ್ರಾಂತಿಕಾರಿ ಗಾಯಕ ಗದ್ದರ್. ಅಂತಹ ಶಕ್ತಿ, ಮನಸ್ಥಿತಿ ಇರುವ ವ್ಯಕ್ತಿಗಳನ್ನು ಕಾಣುವುದು ಈಗಿನ‌ ಕಾಲಘಟ್ಟದಲ್ಲಿ ಅಪರೂಪವಾಗಿದೆ ಎಂದರು.

ಅನ್ಯಾಯ, ಮೋಸ, ಗೊಡ್ಡು ಸಂಪ್ರದಾಯಗಳಿಂದ ಕೂಡಿರುವ ಸಮಾಜ, ಜನರಿಗೆ ಉಪಯೋಗಕ್ಕೆ ಬಾರದ ವ್ಯವಸ್ಥೆಯನ್ನು ಬದಲಾಯಿಸಲು ಹೋರಾಟ, ಚಳವಳಿ ಅತ್ಯಗತ್ಯ, ಆದರೆ ಪ್ರಸ್ತುತ ದಿನಗಳಲ್ಲಿ ಜನರು ಚಳವಳಿ, ಹೋರಾಟಗಳಿಂದ ಹಿಂದೆ ಸರಿದಿರುವುದು ವಿಪರ್ಯಾಸ ಎಂದು ವಿಷಾದ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಚಂದ್ರತೇಜಸ್ವಿ ಮಾತನಾಡಿ ಜೀವನುದುದ್ದಕ್ಕೂ ಪ್ರತಿಕ್ಷಣವೂ ಹೋರಾಟದ ಮನೋಭಾವ ರೂಪಿಸಿಕೊಂಡಿದ್ದರು. ನಕ್ಸಲ್ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ಹಲವು ಗುಂಡೇಟು ತಿಂದಿದ್ದಾರೆ. ಒಂದು ಗುಂಡು ಸ್ಪೈನಲ್ ಕಾರ್ಡ್ ನಲ್ಲಿ ಸೇರಿಕೊಂಡಿದ್ದರಿಂದ ಜೀವನ ಪೂರ್ತಿ ಗುಂಡಿನ ಜೊತೆ ಸಾಗಿದ್ದರು. ಅವಿಭಜಿತ ಆಂಧ್ರಪ್ರದೇಶದ ಸುಧಾರಣೆಗೆ ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.

ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ್ ಮಾತನಾಡಿ ಹಲವು ವರ್ಷಗಳ ಹಿಂದೆ ತಾಲ್ಲೂಕಿನ ಹಲವು ಪ್ರಗತಿ ಪರ ಸಂಘಟನೆಗಳು ಹೈದರಾಬಾದ್ ನಲ್ಲಿ ಗದ್ದರ್ ಅವರನ್ನು ಭೇಟಿಯಾಗಿದ್ದೇವು. ಅಂದಿನ ಜೀತ ಪದ್ದತಿ, ತುಳಿತಕ್ಕೊಳದ ಜನತೆ, ಸಣ್ಣ ಹಿಡುವಳಿದಾರರ ಪರವಾಗಿ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದರು. ಗದ್ದರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಶ್ನಿಸುವ ಮನೋಭಾವ ತನ್ನಿಂತಾನೆ ನಮ್ಮಲ್ಲಿ ಬೆಳೆಯುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ ಮುಖಂಡರು, ಪ್ರಗತಿ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago